ಕೊಡಗಿನಲ್ಲಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆ
ಮಡಿಕೇರಿ, ಮೇ 28: ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಬಳಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆಯಾಗಿದೆ. ಯಡವನಾಡುವಿನ ಅರಣ್ಯದಲ್ಲಿ ಸ್ಥಳ ಪರಿಶೀಲನೆಗೆ ತೆರಳಿದಾಗ ಕ್ರಿ.ಶ 15-16 ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆಯಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.
Recommended Video
ಮೂರು ಪಟ್ಟಿಕೆಗಳಿರುವ ಶಿಲ್ಪವಾಗಿದ್ದು, ಮೂವರು ವೀರರಿಗೂ ಎದುರು ಇರುವ ಇಬ್ಬರು ವೀರರಿಗೂ ಹೋರಾಟದ ದೃಶ್ಯವಿದೆ. ಇವರಲ್ಲಿ ಇಬ್ಬರು ಅಶ್ವಾರೋಹಿಗಳಾಗಿದ್ದು ಕೈಯಲ್ಲಿ ಈಟಿಯಂಥ ಆಯುಧಗಳಿವೆ ಎಂದರು.
ಇನ್ನಿಬ್ಬರು ಯೋಧರ ಕೈಯಲ್ಲಿ ಖಡ್ಗ, ಗುರಾಣಿಗಳಿವೆ. ಉಳಿದೊಬ್ಬ ಬಿಲ್ಲಿಗೆ ಬಾಣಹೂಡಿ ಬಿಡುತ್ತಿದಾನೆ. ಎಲ್ಲರೂ ಚಲನೆಯ ಸ್ಥಿತಿಯಲ್ಲಿರುವ ಶಾಸನ ಪತ್ತೆಯಾಗಿದೆ. ಮಧ್ಯದ ಪಟ್ಟಿಕೆಯಲ್ಲಿ ಮೃತ ವೀರ, ಪುಷ್ಪಕ ವಿಮಾನದಲ್ಲಿ ಕುಳಿತ ಭಂಗಿಯಲ್ಲಿದ್ದು, ಉಭಯ ಪಾರ್ಶ್ವಗಳಲ್ಲಿ ಚಾಮರ ಧಾರಿಣಿ ಅಪ್ಸರೆಯರು ಆಕಾಶದಲ್ಲಿ ಹಾರುವಂತೆ ಚಿತ್ರಿತವಾಗಿದೆ. ಮೊದಲ ಪಟ್ಟಿಕೆಯಲ್ಲಿ ಚಂದ್ರ, ಸೂರ್ಯ, ಬಸವ ಸ್ತಂಭ ಶಿವಲಿಂಗ ಕೈ ಮುಗಿದು ಕುಳಿತಿರುವ ವ್ಯಕ್ತಿ ಹಾಗೂ ಕಳಶ ಕೆತ್ತನೆಗಳಿವೆ.

ಶಾಸನ ಶಿಲೆಯು ಸವೆದು ಹೋಗಿದ್ದು, ಲಿಪಿ ಲಕ್ಷಣಗಳನ್ನು ಆಧರಿಸಿ 15-16 ನೇ ಶತಮಾನಕ್ಕೆ ಸೇರಿದ್ದೆಂದು ಹೇಳಬಹುದಾಗಿದೆ. ಯಾವುದೇ ರಾಜವಂಶ ಅಥವಾ ಅರಸ ಪಾಳೇಗಾರರ ಉಲ್ಲೇಖವಿಲ್ಲ ಎಂದು ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.

ಶಾಸನಪತ್ತೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಜೆ ಯಾಧವ, ಶಾಸನ ತಜ್ಞರಾದ ಮೈಸೂರಿನ ಡಾ.ಎಚ್.ಎಂ ನಾಗರಾಜ್ ರಾವ್ ಹಾಗೂ ಸ್ಥಳೀಯರು ಸಹಕರಿಸಿದ್ದಾರೆ. ಶಾಸನವನ್ನು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ.ರೇಖಾ ಅವರು ಸಂಗ್ರಹಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications