ಕೊಡಗಿನಲ್ಲಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆ

ಮಡಿಕೇರಿ, ಮೇ 28: ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಬಳಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆಯಾಗಿದೆ. ಯಡವನಾಡುವಿನ ಅರಣ್ಯದಲ್ಲಿ ಸ್ಥಳ ಪರಿಶೀಲನೆಗೆ ತೆರಳಿದಾಗ ಕ್ರಿ.ಶ 15-16 ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆಯಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.

Recommended Video

      ಮನೆಯಲ್ಲೇ ಕ್ವಾರಂಟೈನ್ ಗೆ ಅವಕಾಶ ಕೊಡಿ ಎಂದು ಬೇಡಿಕೊಳ್ತಿದ್ದಾರೆ ಗರ್ಭಿಣಿಯರು | Oneindia Kannada

      ಮೂರು ಪಟ್ಟಿಕೆಗಳಿರುವ ಶಿಲ್ಪವಾಗಿದ್ದು, ಮೂವರು ವೀರರಿಗೂ ಎದುರು ಇರುವ ಇಬ್ಬರು ವೀರರಿಗೂ ಹೋರಾಟದ ದೃಶ್ಯವಿದೆ. ಇವರಲ್ಲಿ ಇಬ್ಬರು ಅಶ್ವಾರೋಹಿಗಳಾಗಿದ್ದು ಕೈಯಲ್ಲಿ ಈಟಿಯಂಥ ಆಯುಧಗಳಿವೆ ಎಂದರು.

      ಇನ್ನಿಬ್ಬರು ಯೋಧರ ಕೈಯಲ್ಲಿ ಖಡ್ಗ, ಗುರಾಣಿಗಳಿವೆ. ಉಳಿದೊಬ್ಬ ಬಿಲ್ಲಿಗೆ ಬಾಣಹೂಡಿ ಬಿಡುತ್ತಿದಾನೆ. ಎಲ್ಲರೂ ಚಲನೆಯ ಸ್ಥಿತಿಯಲ್ಲಿರುವ ಶಾಸನ ಪತ್ತೆಯಾಗಿದೆ. ಮಧ್ಯದ ಪಟ್ಟಿಕೆಯಲ್ಲಿ ಮೃತ ವೀರ, ಪುಷ್ಪಕ ವಿಮಾನದಲ್ಲಿ ಕುಳಿತ ಭಂಗಿಯಲ್ಲಿದ್ದು, ಉಭಯ ಪಾರ್ಶ್ವಗಳಲ್ಲಿ ಚಾಮರ ಧಾರಿಣಿ ಅಪ್ಸರೆಯರು ಆಕಾಶದಲ್ಲಿ ಹಾರುವಂತೆ ಚಿತ್ರಿತವಾಗಿದೆ. ಮೊದಲ ಪಟ್ಟಿಕೆಯಲ್ಲಿ ಚಂದ್ರ, ಸೂರ್ಯ, ಬಸವ ಸ್ತಂಭ ಶಿವಲಿಂಗ ಕೈ ಮುಗಿದು ಕುಳಿತಿರುವ ವ್ಯಕ್ತಿ ಹಾಗೂ ಕಳಶ ಕೆತ್ತನೆಗಳಿವೆ.

      An Inscription Dating Back To The Vijayanagara Empire Found In Kodagu

      ಶಾಸನ ಶಿಲೆಯು ಸವೆದು ಹೋಗಿದ್ದು, ಲಿಪಿ ಲಕ್ಷಣಗಳನ್ನು ಆಧರಿಸಿ 15-16 ನೇ ಶತಮಾನಕ್ಕೆ ಸೇರಿದ್ದೆಂದು ಹೇಳಬಹುದಾಗಿದೆ. ಯಾವುದೇ ರಾಜವಂಶ ಅಥವಾ ಅರಸ ಪಾಳೇಗಾರರ ಉಲ್ಲೇಖವಿಲ್ಲ ಎಂದು ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.

      An Inscription Dating Back To The Vijayanagara Empire Found In Kodagu

      ಶಾಸನಪತ್ತೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಜೆ ಯಾಧವ, ಶಾಸನ ತಜ್ಞರಾದ ಮೈಸೂರಿನ ಡಾ.ಎಚ್.ಎಂ ನಾಗರಾಜ್ ರಾವ್ ಹಾಗೂ ಸ್ಥಳೀಯರು ಸಹಕರಿಸಿದ್ದಾರೆ. ಶಾಸನವನ್ನು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ.ರೇಖಾ ಅವರು ಸಂಗ್ರಹಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+