ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ
ಮಡಿಕೇರಿ, ಆಗಸ್ಟ್ 26 : ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನುತ್ತೀರ್ಣಗೊಂಡ ಕಾರಣ ತಾನು ಮಲಗುವ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕೊಡಗಿನ ಗೋಣಿಕೊಪ್ಪ ಬಳಿಯ ಕಾಟ್ರಕೊಲ್ಲಿಯಲ್ಲಿ ನಡೆದಿದೆ.
ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಮೋನಿಕಾ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಾಟ್ರಕೊಲ್ಲಿ ನಿವಾಸಿ ಬಸವರಾಜು ಎಂಬುವರ ಮಗಳು ಮೋನಿಕಾ ಓದುವುದರಲ್ಲಿ ಹಿಂದೆ ಬಿದ್ದಿದ್ದಳು. ಆದರೆ ತಂದೆ ಬಸವರಾಜು ಗಾರೆ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಅಲ್ಲದೆ ಮಗಳನ್ನು ಕಷ್ಟಪಟ್ಟು ಓದಿಸುತ್ತಿದ್ದರು.

ಕಳೆದ ಬಾರಿ ಬರೆದ ಪರೀಕ್ಷೆಯ ಫಲಿತಾಂಶ ಬಂದಾಗ ಮೋನಿಕಾ ಅನುತ್ತೀರ್ಣಳಾಗಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ, ಕಷ್ಟಪಟ್ಟು ಓದಿಸುತ್ತಿದ್ದೇವೆ. ನೀನು ಅನುತ್ತೀರ್ಣಳಾದರೆ ಹೇಗೆ ಎಂದು ಹೆತ್ತವರು ಬುದ್ಧಿವಾದ ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಆಕೆ ಮನೆಯವರೊಂದಿಗೆ ಮಾತನಾಡದೆ ಬೇಸರಗೊಂಡಿದ್ದಳು. ಆದರೆ ಮಗಳು ಸರಿ ಹೋಗುತ್ತಾಳೆ ಎಂದು ನಂಬಿ ಮನೆಯವರು ಸುಮ್ಮನಾಗಿದ್ದರು.
ಗಣೇಶ ಹಬ್ಬದ ದಿನವಾದ ಶುಕ್ರವಾರ ರಾತ್ರಿ ಎಂದಿನಂತೆ ತನ್ನ ಕೊಠಡಿಗೆ ಮಲಗಲೆಂದು ತೆರಳಿದ ಮೋನಿಕಾ, ಎಲ್ಲರೂ ಮಲಗಿದ ಬಳಿಕ ತನ್ನ ಚೂಡಿದಾರದ ವೇಲ್ ಬಳಸಿ ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಎಲ್ಲರಿಗಿಂತ ಮೊದಲೇ ಏಳುತ್ತಿದ್ದ ಮೋನಿಕಾ ಶನಿವಾರ ಬೆಳಿಗ್ಗೆ ಬಹಳಷ್ಟು ಹೊತ್ತಾದರೂ ಕೊಠಡಿಯಿಂದ ಹೊರಗೆ ಬಾರದೆ ಇದ್ದಾಗ ಮನೆಯವರು ಬಾಗಿಲು ತೆರೆದು ನೋಡಿದ್ದಾರೆ. ಆಗ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications