ವಿರಾಜಪೇಟೆ, ಕುಶಾಲನಗರ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ
ಮಡಿಕೇರಿ, ನವೆಂಬರ್ 3: ಮೂವರು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಕ್ಷದ ಪಾಲಾಗಿದೆ.
ಜೆಡಿಎಸ್ ಪಕ್ಷದ ಮೂವರು ಸದಸ್ಯರ ಬೇಷರತ್ ಬೆಂಬಲದೊಂದಿಗೆ ಬಿಜೆಪಿ ಅಧಿಕಾರಕ್ಕೇರಿದ್ದು, ಬಿಜೆಪಿಯ ಜಯವರ್ಧನ್ (ಕೇಶವ್) ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಪಕ್ಷದ ಸುರಯ್ಯ ಭಾನು ಅವರು ಕುಶಾಲನಗರ ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರಿಂದ ಮತ ಚಲಾವಣೆಯಾಯಿತು.

ಬಿಜೆಪಿಯ 6 ಸದಸ್ಯರು, ಸಂಸದ, ಶಾಸಕ ಸೇರಿ ಬಿಜೆಪಿಯ 9 ಮತಗಳಾದರೆ, ಜೆಡಿಎಸ್ ಬೆಂಬಲದ 3 ಮತಗಳೂ ಸೇರಿ ಒಟ್ಟು 12 ಮತಗಳಿಂದ ಕುಶಾಲನಗರ ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯಿತು.
ಜೆಡಿಎಸ್ ಪಕ್ಷದ ಓರ್ವ ಸದಸ್ಯ ತಟಸ್ಥ ನೀತಿ ಅನುಸರಿಸಿದ್ದು, ಕಾಂಗ್ರೆಸ್ ಪಾಲಿಗೆ 6 ಸದಸ್ಯರ ಮತಗಳು ಮಾತ್ರ ದೊರಕಿದವು. ಕುಶಾಲನಗರ ಪಟ್ಟಣ ಪಂಚಾಯತಿಯಲ್ಲಿ ಕಳೆದ 2 ವರ್ಷಗಳಿಂದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯಾಗಿರಲಿಲ್ಲ.

ವಿರಾಜಪೇಟೆ ಪಟ್ಟಣ ಪಂಚಾಯತ
ಇದೇ ವೇಳೆ ವಿರಾಜಪೇಟೆ ಪಟ್ಟಣ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವೂ ಬಿಜೆಪಿ ಮಡಿಲಿಗೆ ಬಂದಿದ್ದು, ಬಿಜೆಪಿಯ ಟಿ.ಆರ್. ಸುಷ್ಮಿತಾ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾದರು.
10 ಮತಗಳಿಂದ ಸುಶ್ಮಿತಾ ಅಧ್ಯಕ್ಷೆಯಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೂ ಬಿಜೆಪಿಯ ಹರ್ಷವರ್ಧನ್ ಆಯ್ಕೆಯಾದರು. ಕಾಂಗ್ರೆಸ್ ನ ಅಗಸ್ಟಿನ್ ಮತ್ತು ಹರ್ಷವರ್ಧನ್ ಅವರಿಗೆ 10-10 ಸಮಬಲದ ಮತಗಳು ಬಂದಿದ್ದವು.
ಆಗ ಲಾಟರಿ ಮೂಲಕ ಆಯ್ಕೆಯಲ್ಲಿ ಹರ್ಷವರ್ಧನ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು. ವಿರಾಜಪೇಟೆಯಲ್ಲಿ ಬಿಜೆಪಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮೂಲಕ ಕಮಲ ಪಕ್ಷ ದಿಗ್ವಿಜಯ ಸಾಧಿಸಿತು.
ಬಿಜೆಪಿ 8 ಸದಸ್ಯರು, ಸಂಸದರು, ಶಾಸಕರ ಮತಗಳು ಸೇರಿ 10 ಮತಗಳು ಬಿಜೆಪಿಗೆ ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಮೈತ್ರಿಕೂಟಕ್ಕೆ ಸೋಲಾಯಿತು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications