ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಡುಗಿ ನಿಂದಿಸಿದಳೆಂದು ಆತ್ಮಹತ್ಯೆ ಮಾಡಿಕೊಂಡ ವಿರಾಜಪೇಟೆ ಯುವಕ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಕೇರಿ, ಫೆಬ್ರವರಿ 19: ತಾನು ಪ್ರೀತಿಸುತ್ತಿದ್ದ ಹುಡುಗಿ ತನ್ನನ್ನು ನಿಂದಿಸಿದಳು ಎಂಬ ಕಾರಣಕ್ಕೆ ನೊಂದ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ಕೊಡಗಿನ ವೀರಾಜಪೇಟೆ ತಾಲ್ಲೂಕಿನ ಹುದಿಕೇರಿ ನಿವಾಸಿ ಸಂಜು (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಶಾಲನಗರ ಸಮೀಪದ ಕೂಡುಮಂಗಳೂರಿನ ಬರ್ಡ್ ಆಫ್ ಪ್ಯಾರಡೈಸ್ ಹೋಂ ಸ್ಟೇಯಲ್ಲಿ ಸುಮಾರು ಐದು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಸಂಜು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇಬ್ಬರ ನಡುವೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಯುವ ಸಂದರ್ಭ "ನೀನು ಮದ್ಯ ಕುಡಿದಿದ್ದೀಯ" ಎಂದು ಆಕೆ ಸಂಜು ಜೊತೆ ವಾಗ್ವಾದ ನಡೆಸಿದ್ದಳು ಎನ್ನಲಾಗಿದೆ.

ಗಾಯಕಿ ಸುಶ್ಮಿತಾ ಆತ್ಮಹತ್ಯೆ; ಪತಿ, ಕುಟುಂಬದವರು ನಾಪತ್ತೆ ಗಾಯಕಿ ಸುಶ್ಮಿತಾ ಆತ್ಮಹತ್ಯೆ; ಪತಿ, ಕುಟುಂಬದವರು ನಾಪತ್ತೆ

Boy Committs Suicide For Insult By His Lover In Virajapete

ಇದರಿಂದ ಸಂಜು ಹೋಂ ಸ್ಟೇಯಲ್ಲಿನ ಕಾಫಿ ತೋಟದ ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಸಂಜು ಮೃತದೇಹವನ್ನು ಕಂಡ ಹೋಂಸ್ಟೇ ವ್ಯವಸ್ಥಾಪಕರು ಆತನ ಮನೆಯವರಿಗೆ ಮತ್ತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಂಜು ಮೃತದೇಹವನ್ನು ಕುಶಾಲನಗರ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

English summary
A young man committed suicide by hanging himself because of an insult by his lover. This incident happened in Madikeri's Virajpet,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X