ಕೊಡಗು: ಗ್ರಾ.ಪಂ ಚುನಾವಣೆಗೆ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
ಮಡಿಕೇರಿ, ಡಿಸೆಂಬರ್ 17: ಲೋಕಸಭೆ, ವಿಧಾನಸಭೆಯ ಚುನಾವಣೆಗಳ ಸಂದರ್ಭದಲ್ಲಿ ಜೈಲಿನಿಂದಲೇ ನಾಮಪತ್ರ ಸಲ್ಲಿಸುವುದು ಹೊಸದೇನಲ್ಲ. ಕೆಲ ವರ್ಷಗಳ ಹಿಂದೆ ಉತ್ತರ ಭಾರತದ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವೇ ಆಗಿತ್ತು.
ಆದರೆ ಕರ್ನಾಟಕ ರಾಜ್ಯದ ಮಟ್ಟಿಗೆ ಅದರಲ್ಲೂ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇಂತಹ ಅಪರೂಪದ ವಿದ್ಯಮಾನ ವರದಿಯಾಗಿರುವುದು ಪುಟ್ಟ ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ.
ಇಲ್ಲಿನ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಪಿ.ಬೋಪಣ್ಣ ಅವರು ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಕೊಡಗಿನ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ವಿದ್ಯಮಾನ ನಡೆದಿದೆ ಎನ್ನಲಾಗಿದೆ. ಕಳೆದ ಎರಡು ಅವಧಿಗೆ 10 ವರ್ಷಗಳ ಕಾಲ ಇವರು ಪಾಲಿಬೆಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹಿಂದಿನಂತೆ ಈ ಬಾರಿಯೂ ಚುನಾವಣೆಗೆ ನಿಲ್ಲುವ ತಯಾರಿ ನಡೆಸುತ್ತಿರುವಾಗ ಇವರ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಈ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಯತ್ನಿಸಿದರೂ ಜಾಮೀನು ಇನ್ನೂ ಸಿಕ್ಕಿಲ್ಲ. ಇದೀಗ ನ್ಯಾಯಾಲಯದಿಂದ ಒಪ್ಪಿಗೆ ಪಡೆದು ಜೈಲಿನಿಂದಲೇ ಗ್ರಾ.ಪಂ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಸ್ಥಳೀಯ ಜಿಲ್ಲಾ ಪಂಚಾಯತಿ ಸದಸ್ಯ ಧರ್ಮಜ ಉತ್ತಪ್ಪ ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಅಗತ್ಯವಾದ ಎಲ್ಲಾ ವ್ಯವಸ್ಥೆಯನ್ನೂ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು, ""ಪಾಲಿಬೆಟ್ಟ್ ಗ್ರಾಮ ಪಂಚಾಯತಿಯಲ್ಲಿ ಸಾಕಷ್ಟು ಅಭಿವೃದ್ಧಿಗೆ ಕೆಲಸ ಮಾಡಿರುವ ಬೋಪಣ್ಣ ಅವರು ರಾಷ್ಟ್ರ ಮಟ್ಟದಲ್ಲಿ ಗ್ರಾಮ ಪಂಚಾಯತಿಗೆ ಪ್ರಶಸ್ತಿ ಬರಲು ಶ್ರಮಿಸಿದ್ದರು'' ಎಂದು ಹೇಳಿದ್ದಾರೆ.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications