6.29ಕ್ಕೆ ತೀರ್ಥಸ್ವರೂಪಿಣಿಯಾಗಿ ಉಕ್ಕಿಹರಿದ ಕಾವೇರಿ ತಾಯಿ
ಭಾಗಮಂಡಲ, ಅಕ್ಟೋಬರ್ 17 : ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಶುಭಸಮಯದಲ್ಲಿ ಅಕ್ಟೋಬರ್ 17ರ ಬೆಳಿಗ್ಗೆ ಸರಿಯಾಗಿ 6.29ಕ್ಕೆ ಭಾಗಮಂಡಲದ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತಾಯಿ ತೀರ್ಥಸ್ವರೂಪಿಣಿಯಾಗಿ ಉಕ್ಕಿಹರಿದಿದ್ದಾಳೆ.
ಈ ವಿಸ್ಮಯಕರ ಘಟನೆಯನ್ನು ನೋಡಲು ಕರ್ನಾಟಕ ಮತ್ತು ದೇಶದ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಮಂಡಲದಲ್ಲಿ ನೆರೆದಿದ್ದಾರೆ. ಕಾವೇರಿ ತೀರ್ಥದಲ್ಲಿ ಪವಿತ್ರಸ್ನಾನ ಮಾಡಿ ಪುನೀತರಾಗಲು ಕಾತುರದಿಂದ ಕಾದಿದ್ದಾರೆ.
ಸರಿಯಾಗಿ 6.29ಕ್ಕೆ ತೀರ್ಥೋದ್ಭವವಾಗುತ್ತಿದ್ದಂತೆ, ಮಂತ್ರಘೋಷಗಳ ನಡುವೆ ಅಲ್ಲಿ ನೆರೆದವರಿಗೆ ತೀರ್ಥಪ್ರೋಕ್ಷಣೆ ಮಾಡಲಾಯಿತು. ಕೊಡಗಳ ಮೂಲಕ ಪುಣ್ಯ ಸ್ನಾನ ಮಾಡಿ ಭಕ್ತಾದಿಗಳು ಪುನೀತರಾದರು. [ಕನ್ಯಾ ರಾಶಿಗೆ ಗುರು ಪ್ರವೇಶ : ಯಾವ ರಾಶಿಗೆ ಏನು ಫಲ?]

ಪ್ರಧಾನ ಅರ್ಚಕರ ನೇತೃತ್ವದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತಾಯಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ. ಮಳೆಗಾಲ ಕೈಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವಸೆಲೆಯಾಗಿರುವ ಕಾವೇರಿ ಜನರನ್ನು ಕಾಪಾಡಲೆಂದು ಕೂಡ ಪೂಜೆ ಸಲ್ಲಿಸಲಾಗುತ್ತಿದೆ.
ಇಲ್ಲಿ ನೆರೆದಿರುವ ಜನರಿಗಾಗಿ ಜಿಲ್ಲಾಡಳಿತ ಸರ್ವಸಿದ್ಧತೆ ಮಾಡಿದೆ. ನೂಕುನುಗ್ಗಲು ಸಂಭವಿಸದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಬಸ್ ಸೌಲಭ್ಯ, ಬಂದವರಿಗೆ ಊಟೋಪಚಾರಕ್ಕಾಗಿ, ವಸತಿಗಾಗಿ ಕೂಡ ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ಮಾಡಿದೆ. [ಜೀವಸೆಲೆಯಾದ ತಾಯಿಗೆ ತಲೆಬಾಗಿ : ಕಾವೇರಮ್ಮ... ಕಾಪಾಡಮ್ಮ...]
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications