ಧನುರ್ ಲಗ್ನ 12.33ಕ್ಕೆ ತೀರ್ಥರೂಪಿಯಾಗಿ ಹರಿದ ಕಾವೇರಿ
ಮಡಿಕೇರಿ, ಅಕ್ಟೋಬರ್ 17: ಕರ್ನಾಟಕದ ಸ್ವರ್ಣ ನದಿ ಎಂದೇ ಕರೆಯಲ್ಪಡುವ ಕಾವೇರಿಯ ಉದ್ಭವ ಕ್ಷೇತ್ರವಾದ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 12.33ಕ್ಕೆ ಧನುರ್ ಲಗ್ನದಲ್ಲಿ ತೀರ್ಥೋದ್ಭವವಾಗಿದೆ.
ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಪವಿತ್ರ ಬ್ರಹ್ಮ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಹರಿದು ಬಂದ ಕಾವೇರಿಯ ದರ್ಶನಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬ್ರಹ್ಮಕುಂಡಿಕೆಯಿಂದ ಚಿಮ್ಮಿದ ಪುಣ್ಯ ಜಲವನ್ನು ಕೊಡ, ಕ್ಯಾನ್, ಡಬ್ಬಿಗಳಲ್ಲಿ ಸಂಗ್ರಹಿಸಲು ಭಕ್ತಾದಿಗಳು ಮುಗಿಬಿದ್ದರು.

ಇದರ ಬೆನ್ನಲ್ಲೇ ಸಾಂಪ್ರದಾಯಿಕ ವಿಧಿ ವಿಧಾನಗಳು, ಪೂಜೆಗಳು ಆರಂಭಗೊಂಡಿದೆ. ಶ್ರೀ ಕಾವೇರಿ ಮಾತೆಗೆ ಪೂಜಾದಿ ಕೈಂಕರ್ಯವನ್ನು ಕ್ಷೇತ್ರದ ಅರ್ಚಕ ಕುಟುಂಬದ ರಾಮಕೃಷ್ಣಾಚಾರ್ ನೇತೃತ್ವದಲ್ಲಿ ನಡೆಯುತ್ತಿವೆ.
ಪುಣ್ಯ ಸ್ನಾನ
ಇದೇ ವೇಳೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತಾದಿಗಳ ಪುಣ್ಯ ಸ್ನಾನ ಮಾಡಿದರು.
ಉತ್ಸವದ ಸಂದರ್ಭ ಭಕ್ತರ ಕೇಶ ಮುಂಡನಕ್ಕೆ ನೂತನವಾಗಿ ನಿರ್ಮಿಸಲಾದ ಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಾವೇರಿ-ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ಸಂಗಮ ಸ್ಥಳವಾದ ಭಾಗಮಂಡಲ, ತಲಕಾವೇರಿಯಲ್ಲಿ ಪಿಂಡ ಪ್ರದಾನಕ್ಕೂ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ತುಲಾಮಾಸದಲ್ಲಿ ಒಂದು ತಿಂಗಳ ಕಾಲ ಕಾವೇರಿ ಮಾತೆಗೆ ಚಿನ್ನದ ಆಭರಣಗಳನ್ನು ತೊಡಿಸಲಾಗುತ್ತದೆ. 1 ತಿಂಗಳು ಕಳೆದ ತರುವಾಯ ಅಂದರೆ ನವೆಂಬರ್ 17ರಂದು ಮರಳಿ ಚಿನ್ನಾಭರಣಗಳನ್ನು ದೇವಳದ ಆಡಳಿತಾಧಿಕಾರಿಗೆ ಹಿಂತಿರುಗಿಸಲಾಗುತ್ತದೆ.
ಕಾವೇರಿ ತುಲಾ ಸಂಕ್ರಮಣ ಜಾತ್ರೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆ, ರಾಜ್ಯ, ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರಲಿರುವುದರಿಂದ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಿದ್ಧತೆಯನ್ನು ಮಾಡಿಕೊಂಡಿದೆ.
ತಲಕಾವೇರಿಯಲ್ಲಿ ಸುಸಜ್ಜಿತ ಶಾಮಿಯಾನದ ನಿರ್ಮಾಣ, ಭಕ್ತರ ನೂಕುನುಗ್ಗಲು ತಪ್ಪಿಸಲು ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ಗಳ ಅಳವಡಿಕೆ, ಕೊಡಗು ಏಕೀಕರಣದಿಂದ ಅನ್ನದಾನಕ್ಕೆ ಸಿದ್ಧತೆ, ಅನ್ನಛತ್ರ, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ.
ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಕೊಡಗು ಏಕೀಕರಣ ರಂಗದ ಆಶ್ರಯದಲ್ಲಿ ಅ. 16ರ ಮಧ್ಯಾಹ್ನದಿಂದ ಆರಂಭಗೊಂಡು ಕಿರು ಸಂಕ್ರಮಣದವರೆಗೆ ಒಂದು ತಿಂಗಳ ಕಾಲ ಅನ್ನಸಂತರ್ಪಣೆ ನಡೆಯಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications