ಗಣಪತಿ ಆತ್ಮಹತ್ಯೆ: ಸಿಐಡಿ ತನಿಖೆ ಬಣ್ಣ ಬಯಲು, ಸಿಬಿಐಗೆ ಸಿಕ್ತು ಗುಂಡು
ಮಡಿಕೇರಿ, ನವೆಂಬರ್ 14 : ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಕಾಟಾಚಾರಕ್ಕೆ ನಡೆಸಿದೆ ಎನ್ನುವ ಆರೋಪಕ್ಕೆ ಪುಷ್ಟಿ ನೀಡುವಂತೆ ಮಂಗಳವಾರ ಸಿಬಿಐ ನಡೆಸಿದ ತಪಾಸಣೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ.
ಒಟ್ಟು 10 ಮಂದಿ ಸಿಬಿಐ ಅಧಿಕಾರಿಗಳ ಸಿಬಿಐ ತಂಡ ಚೆನ್ನೈನಿಂದ ಮಡಿಕೇರಿಗೆ ಆಗಮಿಸಿದ್ದು, ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ವಿನಾಯಕ ಲಾಡ್ಜ್ ನ 315ನೇ ಸಂಖ್ಯೆಯ ಕೊಠಡಿಯನ್ನು ತಪಾಸಣೆ ನಡೆಸಿದೆ. ಈ ವೇಳೆ ಒಂದು ಗುಂಡು ಪತ್ತೆಯಾಗಿದೆ.

ಪೊಲೀಸ್ ಅಧಿಕಾರಿಗಳು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ವೇಳೆ ಬುಲೆಟ್ ಪತ್ತೆಯಾಗಿದೆ. ಹೀಗಾಗಿ ಕೊಠಡಿಯನ್ನು ಸೀಲ್ ಮಾಡಿ ಸಿಬಿಐ ತನ್ನ ವಶಕ್ಕೆ ಪಡೆದಿದೆ. ಆರಂಭದಲ್ಲೇ ಬುಲೆಟ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಿಐಡಿ ತಂಡ ಈ ಪ್ರಕರಣವನ್ನು ಯಾವ ರೀತಿ ತನಿಖೆ ನಡೆಸಿದೆ ಎನ್ನುವ ಬಗ್ಗೆ ಗಂಭೀರವಾದ ಪ್ರಶ್ನೆ ಈಗ ಎದ್ದಿದೆ.
ತನಿಖಾಧಿಕಾರಿ ಕಲೈಮಣಿ ನೇತೃತ್ವದಲ್ಲಿ ತಂಡ, ಗಣಪತಿ ಸಹೋದರ ಎಂ.ಕೆ ಮಾಚಯ್ಯ ಸೇರಿದಂತೆ ಈ ಪ್ರಕರಣದ ಪ್ರಮುಖ ಸಾಕ್ಷಿಗಳಾದ ಬೆಳ್ಯಪ್ಪ, ಉದಯ್, ಜಗನ್ ಅವರನ್ನು ಲಾಡ್ಜ್ ಗೆ ಕರೆಸಿಕೊಂಡು ವಿಚಾರಣೆ ನಡೆಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications