ಪ್ರತಾಪ್ ಸಿಂಹ ಎತ್ತಿದ್ದ ತಕರಾರಿಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ
Recommended Video
ಮಡಿಕೇರಿ, ಡಿಸೆಂಬರ್ 08: ನಿನ್ನೆ ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದ ಪ್ರತಾಪ್ ಸಿಂಹ ನಡುವೆ ನೆರೆ ಅನುದಾನ ವಿಷಯಕ್ಕೆ ವಾಗ್ವಾದ ನಡೆದ ಬೆನ್ನಲ್ಲೇ ಸಿಎಂ ಅವರು ನೆರೆ ಅನುದಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರದಿಂದ ಬಂದಿರುವ 546 ಕೋಟಿ ಅನುದಾಣ ಕೊಡಗಿಗೆ ಮಾತ್ರವಲ್ಲ ಅದು 8 ಜಿಲ್ಲೆಗಳ ನೆರೆ ಅವಘಡಕ್ಕೆ ಬಿಡುಗಡೆ ಆಗಿರುವ ಅನುದಾನ ಎಂದು ಮಾಹಿತಿ ನೀಡಿದರು. ನೆರೆ ಹಾವಳಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಇದೇ ಸಮಯದಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ನವೆಂಬರ್ 18 ರಂದು ರಾಜ್ಯಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ಪ್ರಕೃತಿ ವಿಕೋಪ ನಿಧಿಯಲ್ಲಿರುವ ಹಣದ ಪೈಕಿ 546 ಕೋಟಿ ರೂ.ಗಳನ್ನು 8 ಜಿಲ್ಲೆಗಳ ಪರಿಹಾರ ಕಾಮಗಾರಿಗಳಿಗೆ ಬಳಸುವಂತೆ ಸೂಚನೆ ನೀಡಿದೆ. ಖರ್ಚು ಮಾಡಿರುವ ಸಮಗ್ರ ವರದಿಯನ್ನು 3 ತಿಂಗಳೊಳಗಾಗಿ ಕೇಂದ್ರಕ್ಕೆ ತಲುಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಾಪ್ ಸಿಂಹಗೆ ಭಾಷಣ ನಿಲ್ಲಿಸಿ ಸಾಕು ಎಂದು ಸಿಎಂ ಕುಮಾರಸ್ವಾಮಿ
ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದ ಕೆಲವರು ಕೊಡಗಿಗಾಗಿಯೇ 546 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಕೊಟ್ಟಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹ ಅವರನ್ನು ಕುಟುಕಿದರು.
ಪ್ರತಾಪ್ ಸಿಂಹ ತಕರಾರು ತೆಗೆದಿದ್ದರು
ನಿನ್ನೆ ಮಡಿಕೇರಿಯಲ್ಲಿ ನಡೆದ ವಸತಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಯಲ್ಲಿ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರ, ಕೇಂದ್ರದಿಂದ ಕೊಡಗಿಗೆ ಹಣ ಬಂದಿಲ್ಲ ಎನ್ನುತ್ತಿದೆ ಆದರೆ ಕೇಂದ್ರವು 546 ಕೋಟಿ ಅನುದಾನ ನೀಡಿದೆ ಎಂದು ವೇದಿಕೆಯಲ್ಲಿ ಹೇಳಿದ್ದರು. ಇದು ಸಿಎಂ ಅವರನ್ನು ಸಿಟ್ಟಿಗೇಳಿಸಿತ್ತು.
ಸಾಲಮನ್ನಾ:ಮೊದಲ ಋಣಮುಕ್ತ ಪತ್ರ ಪಡೆಯಲಿದ್ದಾರೆ ದೊಡ್ಡಬಳ್ಳಾಪುರ ರೈತರು
'ಸಂತ್ರಸ್ತರಿಗಾಗಿ ನಿಯಮಗಳನ್ನು ಬದಿಗೆ ಸರಿಸಿದ್ದೇವೆ'
ಕೊಡಗಿನ ವಿಷಯದಲ್ಲಿ ರಾಜ್ಯ ಸರ್ಕಾರವು, ಎನ್ಡಿಆರ್ಎಫ್, ಎಸ್ಡಿಆರ್ಎಫ್ ನಿಯಮಗಳನ್ನು ಬದಿಗೆ ಸರಿಸಿ ಎಲ್ಲ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ದೊರಕುವಂತೆ ಕ್ರಮಕೈಗೊಳ್ಳಲಾಗುತ್ತಿದೆ. ಕೊಡಗಿಗಾಗಿ ರಾಜ್ಯ ಸರ್ಕಾರಿ ನೌಕರರು 103 ಕೋಟಿ, ಸಾರ್ವಜನಿಕರು ಮತ್ತು ಇತರ ಅಧೀನ ಸಂಸ್ಥೆಗಳು 180 ಕೋಟಿ ನೀಡಿದ್ದಾರೆ ಎಲ್ಲ ಹಣವನ್ನು ಎಲ್ಲೂ ಪೋಲಾಗದಂತೆ ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಮಂಡ್ಯ: ಭತ್ತದ ಕೊಯ್ಲಿಗೆ ತಡವಾಗಿ ಬಂದ ಸಿಎಂ, ವಾಪಸ್ ಹೊರಟ ರೈತರು
10.5 ಲಕ್ಷದಲ್ಲಿ ಮನೆ
ಮಳೆ ಹಾನಿಯಲ್ಲಿ ಮನೆ ಕಳೆದುಕೊಂಡವರಿಗೆ 10.5 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ ಮನೆ ನಿರ್ಮಿಸಿಕೊಡಲಾಗುತ್ತದೆ. ಅದಕ್ಕೂ ಹೆಚ್ಚಿನ ವೆಚ್ಚವಾಗುವುದಾದರೆ ಅದನ್ನು ಫಲಾನುಭವಿಗಳೇ ಭರಿಸಬೇಕು. ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಶೆಡ್ಡುಗಳನ್ನು ನಿರ್ಮಿಸಲು ಸುಮಾರು 1 ಲಕ್ಷ ರೂ. ವೆಚ್ಚವಾಗುತ್ತದೆ. ಅದರ ಬದಲಾಗಿ ಪ್ರತಿ ತಿಂಗಳು 10 ಸಾವಿರ ರೂ. ಮನೆ ಬಾಡಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.
ಲಕ್ಷಾಂತರ ಮೌಲ್ಯದ ವಸ್ತುಗಳು ಪೋಲು
ಕೊಡಗಿನ ಜನರಿಗಾಗಿ ಸಾರ್ವಜನಿಕರು ಕಳುಹಿಸಿದ್ದ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬಳಕೆಯಾಗಲಿಲ್ಲ ಎಂದು ವರದಿಗಳು ಪ್ರಕಟವಾಗಿವೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ಯಾವ ವಸ್ತುಗಳೂ ಸಹ ಅನುಪಯುಕ್ತ ಆಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.