ಮೋಡಬಿತ್ತನೆ; ಅವಧಿಗೆ ಮುನ್ನ ಹೆರಿಗೆ ಮಾಡಿಸಿದಂತೆ!
ಮಡಿಕೇರಿ, ಜುಲೈ 16 : ಮಳೆಗಾಲದಲ್ಲಿಯೇ ಮಳೆಯ ಕೈಕೊಟ್ಟಿರುವುದರಿಂದ ಮೋಡ ಬಿತ್ತನೆ ಮೂಲಕ ಮಳೆ ಸುರಿಸುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಈ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೊಡಗು ಪಶ್ಚಿಮಘಟ್ಟ ಮೂಲ ನಿವಾಸಿ ಸಂಘಟನೆ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಅವರು, ವಿಷಕಾರಕ ದ್ರಾವಣದಿಂದ ಮೋಡ ಬಿತ್ತುವುದು, ಗರ್ಭಿಣಿ ಸ್ತ್ರೀಯನ್ನು ಅವಧಿಗೆ ಮುನ್ನ ಬಲವಂತವಾಗಿ ಹೆರಿಗೆ ಮಾಡಿಸಿದಂತೆ ಎಂದು ವ್ಯಾಖ್ಯಾನಿಸಿದ್ದಾರೆ.
ಮಳೆಗಾಗಿ ರಾಜ್ಯ ಸರಕಾರ ವಿಷಕಾರಕ ಮೋಡ ಬಿತ್ತನೆ ಮಾಡಿದರೆ ಕೊಡಗಿನಲ್ಲಿ ಕೃಷಿ ಫಸಲು ಸೇರಿದಂತೆ ಪ್ರಾಕೃತಿಕ ಸಂಪತ್ತು ನಾಶವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮೋಡ ಬಿತ್ತನೆ ವಿರುದ್ಧ ಜಿಲ್ಲೆಯ ಜನತೆ ಸಂಘಟಿತ ಹೋರಾಟ ನಡೆಸುವಂತೆ ಅವರು ಕರೆ ನೀಡಿದರು.

ಕೃತಕ ಮಳೆಗಾಗಿ ಸಲ್ಫರ್ ಆಕ್ಸೈಡ್ ನಂತಹ ರಾಸಾಯನಿಕ ಬಳಸುವುದರಿಂದ ಪರಿಸರದ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ. ಜತೆಗೆ ಪ್ರಕೃತಿ ನಾಶಕ್ಕೂ ಕಾರಣವಾಗಲಿದೆ. ಇಂತಹ ಮಳೆಯಿಂದ ಕೊಡಗಿನಲ್ಲಿ ಈಗಷ್ಟೆ ಫಲ ಕೊಡುತ್ತಿರುವ ಕಿತ್ತಳೆ ಸಹಿತ ಕಾಫಿಗೂ ಕೊಳೆರೋಗ, ಬೆಂಕಿ ರೋಗ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಯ ಬಾವಿ, ಕೆರೆಗಳಲ್ಲಿ ಸಂಗ್ರಹಗೊಳ್ಳುವ ನೈಸರ್ಗಿಕ ನೀರಿನ ಮೇಲೂ ಕೃತಕ ಮೋಡ ಬಿತ್ತನೆಯಿಂದ ವಿಷಮಿಶ್ರಿತ ಮಳೆ ಪರಿಣಾಮ ಬೀರುತ್ತದೆ ಎಂದು ಹೇಳಿರುವ ಅವರು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಕೊಡಗಿನಲ್ಲಿ ಮೋಡ ಬಿತ್ತನೆ ಮಾಡದಂತೆ ಸರಕಾರದಿಂದ ನಿಯೋಜನೆಗೊಂಡಿರುವ ಖಾಸಗಿ ಸಂಸ್ಥೆಗೆ ತಾಕೀತು ಮಾಡುವಂತೆ ಒತ್ತಾಯಿಸಿದ್ದಾರೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications