ಮೋಡಬಿತ್ತನೆ; ಅವಧಿಗೆ ಮುನ್ನ ಹೆರಿಗೆ ಮಾಡಿಸಿದಂತೆ!
ಮಡಿಕೇರಿ, ಜುಲೈ 16 : ಮಳೆಗಾಲದಲ್ಲಿಯೇ ಮಳೆಯ ಕೈಕೊಟ್ಟಿರುವುದರಿಂದ ಮೋಡ ಬಿತ್ತನೆ ಮೂಲಕ ಮಳೆ ಸುರಿಸುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಈ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೊಡಗು ಪಶ್ಚಿಮಘಟ್ಟ ಮೂಲ ನಿವಾಸಿ ಸಂಘಟನೆ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಅವರು, ವಿಷಕಾರಕ ದ್ರಾವಣದಿಂದ ಮೋಡ ಬಿತ್ತುವುದು, ಗರ್ಭಿಣಿ ಸ್ತ್ರೀಯನ್ನು ಅವಧಿಗೆ ಮುನ್ನ ಬಲವಂತವಾಗಿ ಹೆರಿಗೆ ಮಾಡಿಸಿದಂತೆ ಎಂದು ವ್ಯಾಖ್ಯಾನಿಸಿದ್ದಾರೆ.
ಮಳೆಗಾಗಿ ರಾಜ್ಯ ಸರಕಾರ ವಿಷಕಾರಕ ಮೋಡ ಬಿತ್ತನೆ ಮಾಡಿದರೆ ಕೊಡಗಿನಲ್ಲಿ ಕೃಷಿ ಫಸಲು ಸೇರಿದಂತೆ ಪ್ರಾಕೃತಿಕ ಸಂಪತ್ತು ನಾಶವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮೋಡ ಬಿತ್ತನೆ ವಿರುದ್ಧ ಜಿಲ್ಲೆಯ ಜನತೆ ಸಂಘಟಿತ ಹೋರಾಟ ನಡೆಸುವಂತೆ ಅವರು ಕರೆ ನೀಡಿದರು.

ಕೃತಕ ಮಳೆಗಾಗಿ ಸಲ್ಫರ್ ಆಕ್ಸೈಡ್ ನಂತಹ ರಾಸಾಯನಿಕ ಬಳಸುವುದರಿಂದ ಪರಿಸರದ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ. ಜತೆಗೆ ಪ್ರಕೃತಿ ನಾಶಕ್ಕೂ ಕಾರಣವಾಗಲಿದೆ. ಇಂತಹ ಮಳೆಯಿಂದ ಕೊಡಗಿನಲ್ಲಿ ಈಗಷ್ಟೆ ಫಲ ಕೊಡುತ್ತಿರುವ ಕಿತ್ತಳೆ ಸಹಿತ ಕಾಫಿಗೂ ಕೊಳೆರೋಗ, ಬೆಂಕಿ ರೋಗ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಯ ಬಾವಿ, ಕೆರೆಗಳಲ್ಲಿ ಸಂಗ್ರಹಗೊಳ್ಳುವ ನೈಸರ್ಗಿಕ ನೀರಿನ ಮೇಲೂ ಕೃತಕ ಮೋಡ ಬಿತ್ತನೆಯಿಂದ ವಿಷಮಿಶ್ರಿತ ಮಳೆ ಪರಿಣಾಮ ಬೀರುತ್ತದೆ ಎಂದು ಹೇಳಿರುವ ಅವರು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಕೊಡಗಿನಲ್ಲಿ ಮೋಡ ಬಿತ್ತನೆ ಮಾಡದಂತೆ ಸರಕಾರದಿಂದ ನಿಯೋಜನೆಗೊಂಡಿರುವ ಖಾಸಗಿ ಸಂಸ್ಥೆಗೆ ತಾಕೀತು ಮಾಡುವಂತೆ ಒತ್ತಾಯಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications