ಬ್ರಹ್ಮಾಂಡ ಗುರೂಜಿ ವಿರುದ್ಧ ಕೊಡಗಿನಲ್ಲಿ ದೂರು ದಾಖಲು

ಮಡಿಕೇರಿ, ಮೇ 26: ಕೊರೊನಾ ವೈರಸ್ ಪರಿಣಾಮದ ಕುರಿತು ಭವಿಷ್ಯ ನುಡಿದಿರುವ ಬ್ರಹ್ಮಾಂಡ ಗುರೂಜಿ ವಿರುದ್ಧ ಕೊಡಗಿನಲ್ಲಿ ದೂರು ದಾಖಲಾಗಿದೆ. ಕೊರೊನಾ ವೈರಸ್ ನಿಂದ ಬಚಾವ್ ಆಗಲು ದೇವರನ್ನು ನಂಬುವುದೇ ಪರಿಹಾರ ಎಂದಿರುವ ಗುರೂಜಿ, ಕೊರೊನಾ ಜೊತೆಗೆ, ಭೂಕಂಪನದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು. ಭಾರಿ ಭೂಕಂಪದಿಂದ ಕೊಡಗು ನೆಲಸಮವಾಗುತ್ತದೆ ಎಂದಿದ್ದರು.

Recommended Video

      ನಿಮ್ಮ ಕೈ ಬೆರಳುಗಳು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ ನೋಡಿ | Palmistry | Oneindia Kannada

      ಈ ಒಂದು ಭವಿಷ್ಯದ ವಿರುದ್ಧ ಕೊಡಗು ಬೆಳೆಗಾರ ಒಕ್ಕೂಟವು ದೂರು ಸಲ್ಲಿಸಿದೆ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊರೊನಾ ಪರಿಣಾಮಗಳ ಭವಿಷ್ಯ ನುಡಿದಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ, ಎರಡು ವರ್ಷಗಳ ಹಿಂದಿನ ಅತಿವೃಷ್ಟಿಯಿಂದ ಇನ್ನೂ ಸರಿಯಾಗಿ ಚೇತರಿಸಿಕೊಳ್ಳದ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಆಗಲಿದ್ದು, ತುಂಬಾ ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಸಂಪೂರ್ಣ ಕೊಡಗು ಮತ್ತೆ ನಲುಗಿ ಹೋಗಲಿದೆ ಎಂದು ಹೇಳಿದ್ದರು.

      Complaint Registered Against Brahmanda Guruji Nagendra Sharma In Kodagu

      ಗುರೂಜಿ ಭವಿಷ್ಯ ಕೊಡಗಿನ ಜನತೆಯಲ್ಲಿ ಭಯ ಭೀತಿ ಹುಟ್ಟಿಸಿದೆ. ಸಮಾಜದಲ್ಲಿ ಆತಂಕ ಸೃಷ್ಟಿಸಿರುವ ಗುರೂಜಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+