ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಹ್ಮಾಂಡ ಗುರೂಜಿ ವಿರುದ್ಧ ಕೊಡಗಿನಲ್ಲಿ ದೂರು ದಾಖಲು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮೇ 26: ಕೊರೊನಾ ವೈರಸ್ ಪರಿಣಾಮದ ಕುರಿತು ಭವಿಷ್ಯ ನುಡಿದಿರುವ ಬ್ರಹ್ಮಾಂಡ ಗುರೂಜಿ ವಿರುದ್ಧ ಕೊಡಗಿನಲ್ಲಿ ದೂರು ದಾಖಲಾಗಿದೆ. ಕೊರೊನಾ ವೈರಸ್ ನಿಂದ ಬಚಾವ್ ಆಗಲು ದೇವರನ್ನು ನಂಬುವುದೇ ಪರಿಹಾರ ಎಂದಿರುವ ಗುರೂಜಿ, ಕೊರೊನಾ ಜೊತೆಗೆ, ಭೂಕಂಪನದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು. ಭಾರಿ ಭೂಕಂಪದಿಂದ ಕೊಡಗು ನೆಲಸಮವಾಗುತ್ತದೆ ಎಂದಿದ್ದರು.

Recommended Video

ನಿಮ್ಮ ಕೈ ಬೆರಳುಗಳು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ ನೋಡಿ | Palmistry | Oneindia Kannada

ಈ ಒಂದು ಭವಿಷ್ಯದ ವಿರುದ್ಧ ಕೊಡಗು ಬೆಳೆಗಾರ ಒಕ್ಕೂಟವು ದೂರು ಸಲ್ಲಿಸಿದೆ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊರೊನಾ ಪರಿಣಾಮಗಳ ಭವಿಷ್ಯ ನುಡಿದಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ, ಎರಡು ವರ್ಷಗಳ ಹಿಂದಿನ ಅತಿವೃಷ್ಟಿಯಿಂದ ಇನ್ನೂ ಸರಿಯಾಗಿ ಚೇತರಿಸಿಕೊಳ್ಳದ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಆಗಲಿದ್ದು, ತುಂಬಾ ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಸಂಪೂರ್ಣ ಕೊಡಗು ಮತ್ತೆ ನಲುಗಿ ಹೋಗಲಿದೆ ಎಂದು ಹೇಳಿದ್ದರು.

ಮಹಾಮಾರಿ ಕೊರೊನಾ: ಬ್ರಹ್ಮಾಂಡ ಗುರೂಜಿಗಳ ಭಯಾನಕ ಭವಿಷ್ಯ ಮಹಾಮಾರಿ ಕೊರೊನಾ: ಬ್ರಹ್ಮಾಂಡ ಗುರೂಜಿಗಳ ಭಯಾನಕ ಭವಿಷ್ಯ

Complaint Registered Against Brahmanda Guruji Nagendra Sharma In Kodagu

ಗುರೂಜಿ ಭವಿಷ್ಯ ಕೊಡಗಿನ ಜನತೆಯಲ್ಲಿ ಭಯ ಭೀತಿ ಹುಟ್ಟಿಸಿದೆ. ಸಮಾಜದಲ್ಲಿ ಆತಂಕ ಸೃಷ್ಟಿಸಿರುವ ಗುರೂಜಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ.

English summary
Complaint has been registered against Brahmanda Guruji Narendra Sharma for his astrology regarding natural calamities in Kodagu,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X