ನೆರೆ ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ
ಮಡಿಕೇರಿ, ಡಿಸೆಂಬರ್ 26; ಕೇರಳ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಗಡಿ ಭಾಗದ ಜಿಲ್ಲೆಯಾದ ಕೊಡಗಿನಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಎನ್. ವೀಣಾ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಸೇರಿದಂತೆ ಹಲವಾರು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಡಾ. ಎನ್. ವಿ. ಪ್ರಸಾದ್, "ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ" ಸಲಹೆ ನೀಡಿದರು.
ಎಚ್ಚರಿಕೆ ಕೈಗೊಳ್ಳಬೇಕು; "ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ" ಎಂದು ಡಾ. ಎನ್. ವಿ. ಪ್ರಸಾದ್ ಹೇಳಿದರು.
"ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳಬೇಕು. ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕಿದೆ" ಎಂದರು.
"ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸಿ" ಎಂದು ಡಿಎಚ್ಒಗೆ ಡಾ. ಪ್ರಸಾದ್ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಮಾತನಾಡಿ, "ಜಿಲ್ಲೆಯ ಗಡಿ ಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ" ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, "ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ" ಸಲಹೆ ನೀಡಿದರು.
ಕಳೆದ ವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, "ಕೋವಿಡ್ ಸಂಬಂಧಿಸಿದಂತೆ ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ, ಕೊಡಗು, ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ" ಎಂದು ಹೇಳಿದ್ದರು.
"ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಶೀತ, ನೆಗಡಿ, ಜ್ವರ ಮತ್ತಿತರ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಮಾಡಲಾಗುವುದು. ಅನಗತ್ಯ ಆತಂಕ ಬೇಡ" ಎಂದು ಸಚಿವರು ತಿಳಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದರು. "ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು" ಎಂದು ಸೂಚನೆ ನೀಡಿದ್ದರು.
"ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ" ಎಂದು ತಿಳಿಸಿದ್ದರು.
"ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು" ಎಂದು ಸಿದ್ದರಾಮಯ್ಯ ಹೇಳಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications