ನಟಿ ರಮ್ಯ ವಿರುದ್ಧದ ಪ್ರಕರಣ ವಜಾಗೊಳಿಸಿದ ಕೋರ್ಟ್
ರಮ್ಯಾ ವಿರುದ್ಧ ಸೆಕ್ಷನ್ 124-ಎ ಪ್ರಕಾರ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿತ್ತು. ಆದರೆ ರಾಷ್ಟ್ರ ದ್ರೋಹದ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಮತ್ತು ಹೇಳಿಕೆ ರಾಷ್ಟ್ರದ್ರೋಹದ ವ್ಯಾಪ್ತಿಗೂ ಬರುವುದಿಲ್ಲ ಎಂದು ಹೇಳಿ ಕೋರ್ಟ್ ಪ್ರಕರಣ ಕೈಬ
ಸೋಮವಾರಪೇಟೆ, ಏಪ್ರಿಲ್ 19: ನಟಿ ರಮ್ಯಾ ವಿರುದ್ಧ ದಾಖಲಾಗಿದ್ದ ದೇಶದ್ರೋಹದ ಪ್ರಕರಣವನ್ನು ಸೋಮವಾರ ಪೇಟೆ ಜೆಎಂಎಫ್ಸಿ ನ್ಯಾಯಾಲಯ ವಜಾಗೊಳಿಸಿದೆ.
2016 ಪಾಕಿಸ್ತಾನಕ್ಕೆ ಭೇಟಿ ನೀಡಿ ಭಾರತಕ್ಕೆ ಬಂದಿದ್ದ ರಮ್ಯಾ "ಪಾಕಿಸ್ತಾನ ನರಕವಲ್ಲ. ಅಲ್ಲೂ ಒಳ್ಳೆಯವರಿದ್ದಾರೆ," ಎಂದು ಹೇಳಿಕೆ ನೀಡಿದ್ದರು. ಈ ಸಂದರ್ಭ ಇಲ್ಲಿನ ವಕೀಲ ಕಾಟ್ನಮನೆ ವಿಠಲ ಗೌಡ, "ರಮ್ಯಾ ಪಾಕಿಸ್ತಾನ ಪರ ಹೇಳಿಕೆ ನೀಡಿ ರಾಷ್ಟ್ರದ್ರೋಹ ಎಸಗಿದ್ದಾರೆ," ಎಂದು ಆರೋಪಿಸಿ ಜೆಎಂಎಫ್ ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಕುರಿತು ಆಗಸ್ಟ್ 23ರಂದು ಪ್ರಕರಣ ದಾಖಲಿಸಿದ್ದರು.[ಕೊಡವ ಹಾಕಿ ಹಬ್ಬಕ್ಕೆ ಸಜ್ಜಾದ ನಾಪೋಕ್ಲು, ಏ. 17ರಿಂದ ಆರಂಭ]

ರಮ್ಯಾ ವಿರುದ್ಧದ ಈ ಪ್ರಕರಣವನ್ನು ಕಿರಿಯ ಸಿವಿಲ್ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಮಾರ್ಚ್ 27ರಂದು ವಜಾಗೊಳಿಸಿದ್ದಾರೆ.
ರಮ್ಯಾ ವಿರುದ್ಧ ಸೆಕ್ಷನ್ 124-ಎ ಪ್ರಕಾರ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿತ್ತು. ಆದರೆ ರಾಷ್ಟ್ರ ದ್ರೋಹದ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಮತ್ತು ಹೇಳಿಕೆ ರಾಷ್ಟ್ರದ್ರೋಹದ ವ್ಯಾಪ್ತಿಗೂ ಬರುವುದಿಲ್ಲ ಎಂದು ಹೇಳಿ ನ್ಯಾಯಾಲಯ ಪ್ರಕರಣವನ್ನು ಕೈಬಿಟ್ಟಿದೆ.[ಕಾಂಗ್ರೆಸ್ ಬಿಡ್ತೀರಾ ಅಂದಿದ್ದಕ್ಕೆ ಅಂಬರೀಷಣ್ಣ ಏನಂದ್ರು ಗೊತ್ತಾ?]
ಪ್ರಕರಣ ವಜಾಗೊಳಿಸುವ ವೇಳೆ, "ಪಾಕಿಸ್ತಾನವನ್ನು ಭಾರತ ಶತ್ರು ರಾಷ್ಟ್ರವೆಂದು ಘೋಷಿಸಿಲ್ಲ. ಪಾಕಿಸ್ತಾನದ ಸೈನಿಕರು ಉಗ್ರರು ನಮ್ಮ ಸೈನಿಕರನ್ನು ಕೊಂದಿರಬಹುದು. ಹಾಗೆಂದ ಮಾತ್ರಕ್ಕೆ ಅಲ್ಲಿನ ಜನರನ್ನು ತಪ್ಪಿತಸ್ಥರು ಎನ್ನಲು ಸಾಧ್ಯವಿಲ್ಲ," ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಆದರೆ ನ್ಯಾಯಾಲಯದ ಆದೇಶವನ್ನು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಕಾಟ್ನಮನೆ ವಿಠಲಗೌಡ ಹೇಳಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications