ದಕ್ಷಿಣ ಕೊಡಗಿನ ರೈತರಿಗೆ ಇದೀಗ ಮೊಸಳೆ ಕಾಟ
ಮಡಿಕೇರಿ, ಫೆಬ್ರವರಿ 15; ಕೊಡಗಿನ ಬಹುತೇಕ ರೈತರಿಗೆ ಕಾಡಾನೆ , ಹಂದಿಗಳ ಕಾಟ ತಪ್ಪಿದ್ದಲ್ಲ. ಕೆಲವೆಡೆಗಳಲ್ಲಿ ಹುಲಿ, ಚಿರತೆಗಳ ಕಾಟವೂ ಇದೆ. ಅದರಲ್ಲೂ ದಕ್ಷಿಣ ಕೊಡಗಿನ ನಾಗರಹೊಳೆ ಆಭಯಾರಣ್ಯದ ಆಸು ಪಾಸಿನಲ್ಲಿರುವ ರೈತರಿಗೆ ವರ್ಷವಿಡೀ ಕಾಡಾನೆ, ಹುಲಿ ಮತ್ತು ಕರಡಿ ಕಾಟ ಇದೆ. ಇದೀಗ ಈ ಕಾಟದ ಸಾಲಿಗೆ ಮೊಸಳೆಯೂ ಹೊಸದಾಗಿ ಸೇರ್ಪಡೆಗೊಂಡಿದೆ.
ಪೊನ್ನಂಪೇಟೆ ಸಮೀಪದ ನಲ್ಲೂರು, ಕಿರುಗೂರುವಿನ ರೈತರಾದ ತೀತರಮಾಡ ರಾಜ ಎಂಬವರ ಗದ್ದೆಯ ಕೆರೆಯಲ್ಲಿ ಮೊಸಳೆಯೊಂದು ಕಂಡುಬಂದಿದ್ದು ಜನರು ಆತಂಕಗೊಂಡಿದ್ದಾರೆ. ಸುದ್ದಿ ತಿಳಿದ ಪೊನ್ನಂಪೇಟೆ ಹಾಗೂ ತಿತಿಮತಿ ವಲಯದ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳು, ಆರ್ಆರ್ಟಿ ತಂಡ ಸ್ಥಳಕ್ಕೆ ದೌಡಾಯಿಸಿದ್ದು ಆತಂಕಕ್ಕೆ ಕಾರಣವಾಗಿದ್ದ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ ಅವರು ತಮ್ಮ ಕೆರೆಯಿಂದ ಕಾಫಿ ಗಿಡಕ್ಕೆ ನೀರನ್ನು ಹಾಯಿಸುತ್ತಿದ್ದ ಸಂದರ್ಭ ಕಾರ್ಮಿಕರು ಮೋಟರನ್ನು ವೀಕ್ಷಿಸಲು ಆಗಮಿಸಿದಾಗ ಕೆರೆಯ ದಡದಲ್ಲಿ ಮೊಸಳೆಯು ಕಾಣಿಸಿದೆ. ಕಾರ್ಮಿಕರನ್ನು ಕಂಡ ಮೊಸಳೆಯು ಕೆರೆಯಲ್ಲಿ ದುಮುಕಿದೆ. ವಿಷಯವನ್ನು ಕಾರ್ಮಿಕರು ಮಾಲೀಕರಿಗೆ ತಿಳಿಸಿದ್ದಾರೆ.

ಕೂಡಲೇ ಮಾಲೀಕರು ರೈತ ಸಂಘದ ಪದಾಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ತಿಳಿಸಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೆರೆಯಲ್ಲಿ ಅಡಗಿದ್ದ ಮೊಸಳೆಯ ಸೆರೆಗೆ ಕ್ರಮ ಕೈಗೊಂಡಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಕೆರೆಯಲ್ಲಿರುವ ನೀರನ್ನು ಮೋಟರ್ ಮೂಲಕ ಮೇಲೆತ್ತಿ ಖಾಲಿ ಮಾಡಿದ ನಂತರ ಮೊಸಳೆಯು ಕೆರೆಯಲ್ಲಿ ಅಡಗಿರುವುದನ್ನು ಪತ್ತೆ ಹಚ್ಚಿದ ಸಿಬ್ಬಂದಿಗಳು ಬಲೆಯ ಮೂಲಕ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೆರೆಯ ಅನತಿ ದೂರದಲ್ಲಿ ಕೀರೆ ಹೊಳೆಯು ಹರಿಯುತ್ತಿದ್ದು ಹೊಳೆಯ ಮೂಲಕ ಮೊಸಳೆಯು ಆಗಮಿಸಿ ಕೆರೆಯಲ್ಲಿ ಆಶ್ರಯ ಪಡೆದಿರಬಹುದೆಂದು ಅಂದಾಜಿಸಲಾಗಿದೆ. ನಂತರ ಮೊಸಳೆಯನ್ನು ರಕ್ಷಿಸಿ ಕಾವೇರಿ ನದಿಗೆ ಬಿಡಲಾಯಿತು.
ಅನೇಕರು ತೋಟಗಳಲ್ಲಿ ಕೆರೆಗಳನ್ನು ಹೊಂದಿದ್ದು ಮೀನು ಸಾಕಣೆ ಮಾಡುತ್ತಿದ್ದಾರೆ. ಕಾಫಿ, ಕರಿಮೇಣಸು ದರ ಕುಸಿತದ ನಡುವೆ ಮೀನುಗಾರಿಕಾ ಚಟುವಟಿಕೆಯಿಂದ ಬೆಳೆಗಾರರು ಆರ್ಥಿಕವಾಗಿ ಒಂದಷ್ಟು ಲಾಭ ಗಳಿಸುತಿದ್ದು, ಈಗ ಮೊಸಳೆ ಕಾಟದಿಂದ ಅದಕ್ಕೂ ಕಲ್ಲು ಬೀಳಬಹುದೇ? ಎಂದು ರೈತರು ಆತಂಕಗೊಂಡಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications