ದುಸ್ಥಿತಿಯಲ್ಲಿ ಹಾರಂಗಿ ನಾಲೆ: ಮೈಸೂರು-ಹಾಸನ ರೈತರಲ್ಲಿ ಆತಂಕ
ಮಡಿಕೇರಿ, ಆಗಸ್ಟ್ 30: ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನಾಲೆಗಳಿಗೆ ಬಿಡಲಾಗುತ್ತಿದೆ. ಆದರೆ ನಾಲೆಗಳು ದುಸ್ಥಿತಿಯಲ್ಲಿರುವ ಕಾರಣದಿಂದ ನೀರು ಸಮರ್ಪಕವಾಗಿ ತಲುಪುತ್ತಿಲ್ಲ ಹಾಗೂ ಒಡೆದು ಹಾನಿಯಾಗುವ ಭಯ ರೈತರನ್ನು ಕಾಡುತ್ತಿದೆ.
ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ನಾಲೆಗಳನ್ನು ಪರಿಶೀಲಿಸಿ ದುಸ್ಥಿತಿಯಲ್ಲಿದ್ದರೆ ಅವುಗಳನ್ನು ದುರಸ್ತಿ ಪಡಿಸುವ ಕೆಲಸ ಮಾಡಬೇಕು. ಆದರೆ ಅದ್ಯಾವುದನ್ನು ಮಾಡದ ಕಾರಣದಿಂದಾಗಿ ಈಗ ರೈತರು ಆತಂಕ ಪಡುವಂತಾಗಿದೆ.

ಹಾಗೆನೋಡಿದರೆ ಹಾರಂಗಿ ಜಲಾಶಯ ಕೊಡಗಿನಲ್ಲಿ ಇದ್ದರೂ ಇದರಿಂದ ಹೆಚ್ಚಿನ ಅನುಕೂಲ ಪಡೆಯುತ್ತಿರುವವರು ಮೈಸೂರು ಮತ್ತು ಹಾಸನ ಜಿಲ್ಲೆಯ ರೈತರು. ಈ ರೈತರ ಕೃಷಿಭೂಮಿಗೆ ಹರಿಸಲು ನಿರ್ಮಿಸಿದ ಕಾಲುವೆಗಳು ಇದೀಗ ಅಲ್ಲಲ್ಲಿ ದುಸ್ಥಿತಿಗೀಡಾಗಿದ್ದು, ಕೆಲವೆಡೆ ಮರಳಿನ ಮೂಟೆಯನ್ನಿಟ್ಟು ರಕ್ಷಣೆ ಮಾಡಲಾಗಿದೆ.
ಹಾರಂಗಿ ಮುಖ್ಯ ನಾಲೆಯು, ಅಣೆಕಟ್ಟೆಯ ಒಂದು ಕಿ.ಮೀ. ಅಂತರದಲ್ಲಿರುವ ಮಾವಿನ ಹಳ್ಳದ ಸಮೀಪದ ತಿರುವಿನಲ್ಲಿ ಈಗಾಗಲೇ ಬಿರುಕುಗೊಂಡಿದೆ. ನಾಲೆಗೆ 1200 ಕ್ಯೂಸೆಕ್ಸ್ ಗಿಂತಲೂ ಹೆಚ್ಚು ನೀರು ಹರಿದು ಬರುತ್ತಿರುವುದರಿಂದ ನೀರಿನ ಒತ್ತಡಕ್ಕೆ ನಾಲೆ ಒಡೆಯುವ ಭಯವೂ ಇಲ್ಲದಿಲ್ಲ. ಒಂದು ವೇಳೆ ನಾಲೆ ಒಡೆದರೆ ಅದರಿಂದಾಗುವ ನಷ್ಟ ಹೇಳತೀರದ್ದಾಗಲಿದೆ.
ಮುಖ್ಯ ನಾಲೆಯ ಮೂಲಕ ಕಣಿವೆಯ ವರೆಗೆ ಹರಿಯುವ ನೀರು ತದನಂತರ ಎಡದಂಡೆ ಮತ್ತು ಬಲದಂಡೆ ನಾಲೆಗಳಾಗಿ ಮಾರ್ಪಟ್ಟಿದೆ. ನಾಲೆಯ ನಿರ್ಮಾಣದ ಸಂದರ್ಭ ಹಾರಂಗಿ ಅಣೆಕಟ್ಟೆಯ ಸಮೀಪದ ಮಾವಿನ ಹಳ್ಳದ ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಅಚ್ಚುಕಟ್ಟು ಪ್ರದೇಶಗಳು ಹೆಚ್ಚಾದಂತೆ ಅಣೆಕಟ್ಟೆಯಿಂದ ಮುಖ್ಯನಾಲೆಯಲ್ಲಿ ಹೆಚ್ಚು ನೀರು ಹರಿಸಲಾಗುತ್ತಿದೆ. ನಾಲೆಯ ಸೇತುವೆಯು ಕಿರಿದಾಗಿದ್ದು, ನೀರಿನ ಒತ್ತಡದಿಂದ ಹಿಂಬದಿಯ ಸೆಳೆತ ಹಾಗೂ ತಿರುವಿನ ಸ್ಥಳವಾಗಿರುವುದರಿಂದ ಬಿರುಕು ಬಿಟ್ಟಿದ್ದು, ನೀರು ಸೋರಿಕೆಯಾಗುತ್ತಿರುವುದು ಕಂಡುಬರುತ್ತಿದೆ.
ಅಣೆಕಟ್ಟೆಯ ಅನುದಾನದಲ್ಲಿ ಕಳೆದ ವರ್ಷವಷ್ಟೆ ಈ ಸ್ಥಳಕ್ಕೆ ನಾಲೆಯ ತಳದ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಆದರೆ, ಇಕ್ಕೆಲಗಳ ಕಾಮಗಾರಿಯನ್ನು ಮಾಡದೆ ಇರುವ ಕಾರಣದಿಂದ ನೀರು ಸೋರುತ್ತಿದೆ ಎಂಬ ದೂರು ಕೇಳಿ ಬರುತ್ತಿದೆ.
1994ರಲ್ಲಿ ನಾಲೆಯು ಒಡೆದುಹೋಗಿ ನೂರಾರು ಎಕರೆಯಲ್ಲಿ ಬೆಳೆದ ಬೆಳೆ ನಷ್ಟವಾಗಿ ಸಮೀಪದಲ್ಲಿದ್ದ ರೈತರ ಮನೆಗಳಿಗೂ ಸಹ ಅಪಾಯ ಎದುರಾದ ಇತಿಹಾಸವೂ ನಮ್ಮ ಮುಂದಿದೆ ಹೀಗಿರುವಾಗ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡುತ್ತಿದೆ.
ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ನಾಲೆಗಳನ್ನು ಸದಾ ಸುಸ್ಥಿತಿಯಲ್ಲಿರುವಂತೆ ನೋಡಿಕೊಂಡರೆ ಮುಂದೆ ಆಗುವ ಅನಾಹುತವನ್ನು ತಪ್ಪಿಸಬಹುದೇನೋ?
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications