ಇನ್ಮುಂದೆ ದೆಹಲಿ ಪರೇಡ್ ಮೈದಾನ ಕಾರ್ಯಪ್ಪ ಮೈದಾನ!
ಮಡಿಕೇರಿ, ಜನವರಿ 7: ಯೋಧರ ನಾಡು ಕೊಡಗು ಜಿಲ್ಲೆ ದೇಶ ರಕ್ಷಣೆಗಾಗಿ ಸಾವಿರಾರು ಯೋಧರನ್ನು ನೀಡಿದೆ. ನೀಡುತ್ತಲೂ ಇದೆ. ಇವರ ಪೈಕಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಕೊಡಗಿನ ಹೆಮ್ಮೆಯಾಗಿದ್ದಾರೆ. ಶಿಸ್ತಿನ ಸಿಪಾಯಿಯಾಗಿ ಬದುಕಿದ ಅವರ ಬಗ್ಗೆ ಎಷ್ಟು ಮಾತನಾಡಿದರೂ ಸಾಲದು. ಇದೀಗ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿರುವ ಆರ್ಮಿ ಪರೇಡ್ ಮೈದಾನದಲ್ಲಿ ಕಾರ್ಯಪ್ಪ ಪ್ರತಿಮೆಯನ್ನು ನಿರ್ಮಿಸಿ, ಪರೇಡ್ ಮೈದಾನಕ್ಕೆ ಅವರ ಹೆಸರನ್ನು ನಾಮಕರಣ ಮಾಡಿರುವುದು ಇತಿಹಾಸವಾಗಿದೆ.[ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಜಾಗ ಹಸ್ತಾಂತರ]
ದೇಶದ ರಕ್ಷಣಾ ಪಡೆಯ ಪ್ರಥಮ ಮಹಾದಂಡನಾಯಕ (ಕಮಾಂಡರ್ ಇನ್ ಚೀಫ್)ರಾಗಿ ಸೇನಾ ಪಿತಾಮಹ ಎಂದು ಖ್ಯಾತಿ ಪಡೆದಿದ್ದ ಕೊಡಗಿನ ಹೆಮ್ಮೆಯ ಪುತ್ರ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆ ಉದ್ಘಾಟಿಸಿ, ಪರೇಡ್ ಮೈದಾನಕ್ಕೆ ನಾಮಕರಣವನ್ನು ಭೂ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ದಲ್ಬೀರ್ ಸಿಂಗ್ ಇತ್ತೀಚೆಗೆ ಮಾಡಿದ್ದಾರೆ.

ಕೊಡಂದೇರ ದಿವಂಗತ ಮಾದಪ್ಪ- ಕಾವೇರಿ ದಂಪತಿ ಪುತ್ರರಾದ ಕಾರ್ಯಪ್ಪ ಅವರು 1949ರಿಂದ 1952ರ ತನಕ ರಕ್ಷಣಾ ಪಡೆ ಮಹಾದಂಡನಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಸೇವೆ ಪರಿಗಣಿಸಿ, 1986ರಲ್ಲಿ ಅವರಿಗೆ ಅತ್ಯುನ್ನತ ಗೌರವವಾದ ಫೀಲ್ಡ್ ಮಾರ್ಷಲ್ ನೀಡಲಾಗಿತ್ತು.
ಇನ್ನೊಂದು ವಿಶೇಷ ಏನೆಂದರೆ ದೇಶದ ರಕ್ಷಣಾ ಪಡೆಯ ಮೂರು ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದು ಇವರೊಬ್ಬರೇ. ಅದು ಸೇನಾ ಇತಿಹಾಸವೂ ಹೌದು. ಇಂಥ ಮಹಾನ್ ವ್ಯಕ್ತಿಯ ಹೆಸರನ್ನು ದೆಹಲಿಯಲ್ಲಿರುವ ಪರೇಡ್ ಮೈದಾನಕ್ಕೆ ಇಡಬೇಕೆಂಬುದು ಕೊಡಗಿನ ಯೋಧರ ಬಯಕೆಯಾಗಿತ್ತು.[ದೇಶಕ್ಕಾಗಿ ಪ್ರಾಣತೆತ್ತ ಕೊಡವ ಯೋಧರೆಷ್ಟು ಗೊತ್ತಾ?]
ಈ ಬಗ್ಗೆ ಕೆಲ ತಿಂಗಳ ಹಿಂದೆ ಕೊಡಗಿಗೆ ಆಗಮಿಸಿದ್ದ ಭೂ ಸೇನೆ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರಿಗೆ ಹಿರಿಯ ಸೇನಾಧಿಕಾರಿಗಳು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ಅವರು, ತಮ್ಮ ಸೇವಾ ಅವಧಿಯೊಳಗೆ ಆ ಕಾರ್ಯವನ್ನು ಮಾಡುವ ಮೂಲಕ ಕೊಡಗಿನ ಯೋಧರ ಮಾತಿಗೆ ಮನ್ನಣೆ ನೀಡಿದ್ದಾರೆ.
ಕೊಡಗಿನವರಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸೇರಿದಂತೆ ಲೆಫ್ಟಿನೆಂಟ್ ಜನರಲ್ ಗಳಾಗಿ ಅಪ್ಪಾರಂಡ ಅಯ್ಯಪ್ಪ, ಕೋದಂಡ ಸೋಮಣ್ಣ, ಬಿದ್ದಂಡ ಸಿ.ನಂದ, ಬುಟ್ಟಿಯಂಡ ಕೆ.ಬೋಪಣ್ಣ, ಬಲ್ಲಚಂಡ ಕೆ. ಚಂಗಪ್ಪ ಅವರು ಸೇನೆ ಉನ್ನತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.[ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ ಭಾರತ]
ಅಲ್ಲದೆ ಸುಮಾರು 20 ಮಂದಿ ಮೇಜರ್ ಜನರಲ್ ಗಳಾಗಿ ಮತ್ತು ಅದಕ್ಕಿಂತ ಕೆಳ ಮಟ್ಟದ ಅಧಿಕಾರಿಗಳಾಗಿ, ಯೋಧರಾಗಿ ಕಾರ್ಯನಿರ್ವಹಿಸಿದ ಮತ್ತು ಕಾರ್ಯನಿರ್ವಹಿಸುತ್ತಿರುವರಿಗೆ ಇದೊಂದು ಹೆಮ್ಮೆಯಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications