ಒಡತಿ ಕಂಡೊಡನೆ ಕುಣಿದು ಕುಪ್ಪಳಿಸಿ ಪರಿಹಾರ ಕೇಂದ್ರಕ್ಕೆ ತೆರಳಿದ ನಾಯಿ
ಮಂಗಳೂರು, ಆಗಸ್ಟ್ 27: ಭೂ ಕುಸಿತ ಸೇರಿದಂತೆ ಜಲಸ್ಫೋಟ ಸಂಭವಿಸಿದ ಜೋಡುಪಾಲ, ಮದೆನಾಡು, ಮಣ್ಣಂಗೇರಿ ಬೆಟ್ಟ ಪ್ರದೇಶದಲ್ಲಿ ಮನೆ ಮಾಡಿಕೊಂಡಿದ್ದ ಸಂತ್ರಸ್ತರು ವಾರದ ಬಳಿಕ ಮತ್ತೆ ಮನೆ ಕಡೆ ತೆರಳಿ ಮನೆಯ ಪರಿಸ್ಥಿತಿ ಪರಿಶೀಲಿಸುತ್ತಿದ್ದಾರೆ.
ರಕ್ಷಣಾ ತಂಡಗಳೊಂದಿಗೆ ಮನೆಗಳತ್ತ ತೆರಳುತ್ತಿರುವ ಸಂತ್ರಸ್ತರು ಮನೆಯಲ್ಲಿರುವ ಅಗತ್ಯ ವಸ್ತುಗಳನ್ನು ತಾವು ಆಶ್ರಯ ಪಡೆದ ಸಂತ್ರಸ್ತರ ಪರಿಹಾರ ಕೇಂದ್ರಗಳಿಗೆ ಕೊಂಡೊಯ್ಯುತ್ತಿದ್ದಾರೆ.
ಅಪಾಯಕಾರಿ ಪರಿಸ್ಥಿತಿಯಲ್ಲಿರುವ ಮನೆಗಳತ್ತ ಸಂತ್ರಸ್ತರನ್ನು ರಕ್ಷಣಾ ತಂಡಗಳು ಕರೆದುಕೊಂಡು ಹೋಗುವ ಕಾರ್ಯ ಮಾಡುತ್ತಿವೆ. ಹಾಗೆಯೇ ಬೆಟ್ಟ ಪ್ರದೇಶದಲ್ಲಿ ಆಹಾರ ಇಲ್ಲದೆ ಕಂಗಾಲಾಗಿದ್ದ ಸಾಕು ಪ್ರಾಣಿಗಳನ್ನು ಸುರಕ್ಷಿತವಾಗಿ ತರಲು ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್ ಗಣೇಶ್ ನೇತೃತ್ವದ ಯುವಕರ ತಂಡ ಕೈ ಜೋಡಿಸಿದೆ.

ಇನ್ನೊಂದೆಡೆ ಮಗಳು ಸಂಪರ್ಕಕ್ಕೆ ಸಿಗದೆ ಸುದ್ದಿಯಾಗಿದ್ದ ಎರಡನೇ ಮಣ್ಣಂಗೇರಿ ನಿವಾಸಿ 75 ವರ್ಷದ ಗಿರಿಜಾ ಎಂಬುವವರನ್ನು ಮತ್ತೆ ಮನೆ ಕಡೆ ರಕ್ಷಣಾ ತಂಡ ಕರೆದುಕೊಂಡು ಹೋಗಿತ್ತು. ಗುಡ್ಡದ ಮೇಲೆ ಬಿರುಕು ಬಿಟ್ಟ ಗಿರಿಜಾ ಅವರ ಮನೆ ನೆಲ ಸಮವಾಗುವ ಹಂತದಲ್ಲಿದೆ. ತನ್ನ ಕೈಯಾರೆ ನಿರ್ಮಿಸಿದ ಮನೆ ಕಂಡು ಆ ಹಿರಿಜೀವ ಮರುಗಿದೆ.

ಮನೆಯಲ್ಲಿ ಉಳಿದಿದ್ದ ಅಗತ್ಯ ವಸ್ತುಗಳನ್ನು ಕೊಂಡು ಮನೆಯಿಂದ ಹೊರಡುವಷ್ಟರಲ್ಲಿ ಗಿರಿಜಾ ಅವರ ಧ್ವನಿ ಕೇಳಿ ಮನೆಯ ಸಾಕು ನಾಯಿ ಓಡಿ ಬಂದಿದೆ. ಅವರನ್ನು ಕಂಡು ಖುಷಿಯಿಂದ ಕುಪ್ಪಳಿಸಿದೆ. ನಂತರ ತನ್ನ ಸಾಕು ನಾಯಿಗೆ ಬನ್ ಹಾಕಿದ ಗಿರಿಜಾ ಅದನ್ನು ಸಂಪಾಜೆಯ ಪರಿಹಾರ ಕೇಂದ್ರಕ್ಕೆ ಕೊಂಡೊಯ್ದಿದ್ದಾರೆ. ಬದುಕಿದೆಯಾ ಬಡ ಜೀವವೇ.. ಎಂದು ನಾಯಿ ಗಿರಿಜಾ ಅವರೊಂದಿಗೆ ಸಂಪಾಜೆಯತ್ತ ಹೆಜ್ಜೆ ಹಾಕಿದೆ. ತನ್ನ ಒಡತಿಯನ್ನು ಕಂಡೊಡನೆ ಆ ಮೂಕ ಪ್ರಾಣಿಯ ಖುಷಿ ಅಕ್ಷರಗಳಲ್ಲಿ ವಿವರಿಸಲು ಸಾದ್ಯವಿಲ್ಲ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications