ಮಡಿಕೇರಿ, ಚಾಮರಾಜನಗರದಲ್ಲಿ ಮಿತಿಮೀರುತ್ತಿದೆ ಕಾಡಾನೆ ಹಾವಳಿ
ಮಡಿಕೇರಿ, ಜುಲೈ 6: ಮಡಿಕೇರಿ, ಚಾಮರಾಜನಗರದ ಅನೇಕ ಕಡೆಗಳಲ್ಲಿ ದಿನನಿತ್ಯ ಕಾಡಾನೆಗಳ ಭೀತಿ ಎದುರಾಗಿದೆ. ಗ್ರಾಮಗಳಲ್ಲಿ ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲ್ಪಡುವ ಅನೇಕ ಕಡೆಗಳಲ್ಲಿ ಕಾಡಾನೆಗಳು ದಿನನಿತ್ಯ ದಾಳಿ ನಡೆಸುತ್ತಿವೆ.
ಚಾಮರಾಜನಗರದ ಎಚ್.ಡಿ.ಕೋಟೆ ಬಳಿಯ ಅನೇಕ ಕಡೆಗಳಲ್ಲಿ ದಾಳಿಯಾಗುತ್ತಿದ್ದರೆ, ಮತ್ತೊಂದೆಡೆ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳು ತೋಟದ ಒಳಗೆ ನುಗ್ಗಿವೆ. ಅಲ್ಲದೇ ರಸ್ತೆಗೆ ಬಂದು ಅತ್ತಿಂದಿತ್ತ ಓಡಾಡಿದ ಪರಿಣಾಮ ಶಾಲೆಗೆ ಹೋಗುವ ಮಕ್ಕಳು, ವಾಹನ ಸವಾರರು ಭಯಭೀತರಾಗಿದ್ದಾರೆ.
ಕೊಡಗನಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಗಳು ಕಾಫಿ ತೋಟಗಳಲ್ಲಿ ಸ್ವಚ್ಛಂದವಾಗಿ ವಿಹರಿಸಿ ತೋಟದತ್ತ ಸಾಗುತ್ತಿದ್ದ ಮಾಲೀಕರು ಹಾಗೂ ಕಾರ್ಮಿಕರ ಕಣ್ಣಿಗೆ ಬಿದ್ದಿವೆ. ನಾಯಿಗಳ ಬೊಗಳುವಿಕೆ ಮತ್ತು ಪಟಾಕಿ ಸದ್ದಿನಿಂದ ಬೆದರಿದ ಆನೆಗಳು ಏಕಾಏಕಿ ರಸ್ತೆಗೆ ಬಂದ ಪರಿಣಾಮ ಜನರು ಸಹ ಚೆಲ್ಲಾಪಿಲ್ಲಿಯಾದರು. ಗ್ರಾಮಸ್ಥರು ಸೇರಿಕೊಂಡು ಕಾಡಾನೆಗಳನ್ನು ಓಡಿಸುವ ಪ್ರಯತ್ನ ಮಾಡಿದರೂ ಒಂದು ತೋಟದಿಂದ ಇನ್ನೊಂದು ತೋಟಕ್ಕೆ ಆನೆಗಳು ಓಡಿದವೇ ಹೊರತು ಅರಣ್ಯ ಪ್ರದೇಶವನ್ನು ಸೇರುವ ಪ್ರಯತ್ನ ಮಾಡಲಿಲ್ಲ.

ಕುಶಾಲನಗರದ ವಲಯ ಅಧಿಕಾರಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆನೆಗಳನ್ನು ಓಡಿಸುವ ಕೆಲಸ ಮಾಡಿದರು.
ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ತೋಟ, ಗದ್ದೆ ಮತ್ತು ಕೃಷಿ ಫಸಲಿಗೆ ಸೀಮಿತವಾಗಿತ್ತು. ಇದೀಗ ನಾಯಿ, ಮನುಷ್ಯರು ಮತ್ತು ಪಟಾಕಿಯ ಭಯವನ್ನು ಮೀರಿ ಆನೆಗಳು ರಸ್ತೆಗೆ ಬಂದು ಹಗಲಿನ ವೇಳೆಯಲ್ಲೇ ತಾನು ನಡೆದದ್ದೇ ದಾರಿ ಎಂದು ಭಯ ಹುಟ್ಟಿಸುತ್ತಿವೆ. ಸ್ಥಳೀಯರಲ್ಲಿ ಆತಂಕ ತುಂಬಿವೆ. ಅರಣ್ಯ ಇಲಾಖೆ ಹೆಚ್ಚಿನ ಜವಾಬ್ದಾರಿಯಿಂದ ಸಮಸ್ಯೆಯ ಇತ್ಯರ್ಥಕ್ಕೆ ಮುಂದಾಗಬೇಕೆಂಬುದು ಜನರ ಕೋರಿಕೆಯಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications