ಮಡಿಕೇರಿ, ಚಾಮರಾಜನಗರದಲ್ಲಿ ಮಿತಿಮೀರುತ್ತಿದೆ ಕಾಡಾನೆ ಹಾವಳಿ
ಮಡಿಕೇರಿ, ಜುಲೈ 6: ಮಡಿಕೇರಿ, ಚಾಮರಾಜನಗರದ ಅನೇಕ ಕಡೆಗಳಲ್ಲಿ ದಿನನಿತ್ಯ ಕಾಡಾನೆಗಳ ಭೀತಿ ಎದುರಾಗಿದೆ. ಗ್ರಾಮಗಳಲ್ಲಿ ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲ್ಪಡುವ ಅನೇಕ ಕಡೆಗಳಲ್ಲಿ ಕಾಡಾನೆಗಳು ದಿನನಿತ್ಯ ದಾಳಿ ನಡೆಸುತ್ತಿವೆ.
ಚಾಮರಾಜನಗರದ ಎಚ್.ಡಿ.ಕೋಟೆ ಬಳಿಯ ಅನೇಕ ಕಡೆಗಳಲ್ಲಿ ದಾಳಿಯಾಗುತ್ತಿದ್ದರೆ, ಮತ್ತೊಂದೆಡೆ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳು ತೋಟದ ಒಳಗೆ ನುಗ್ಗಿವೆ. ಅಲ್ಲದೇ ರಸ್ತೆಗೆ ಬಂದು ಅತ್ತಿಂದಿತ್ತ ಓಡಾಡಿದ ಪರಿಣಾಮ ಶಾಲೆಗೆ ಹೋಗುವ ಮಕ್ಕಳು, ವಾಹನ ಸವಾರರು ಭಯಭೀತರಾಗಿದ್ದಾರೆ.
ಕೊಡಗನಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಗಳು ಕಾಫಿ ತೋಟಗಳಲ್ಲಿ ಸ್ವಚ್ಛಂದವಾಗಿ ವಿಹರಿಸಿ ತೋಟದತ್ತ ಸಾಗುತ್ತಿದ್ದ ಮಾಲೀಕರು ಹಾಗೂ ಕಾರ್ಮಿಕರ ಕಣ್ಣಿಗೆ ಬಿದ್ದಿವೆ. ನಾಯಿಗಳ ಬೊಗಳುವಿಕೆ ಮತ್ತು ಪಟಾಕಿ ಸದ್ದಿನಿಂದ ಬೆದರಿದ ಆನೆಗಳು ಏಕಾಏಕಿ ರಸ್ತೆಗೆ ಬಂದ ಪರಿಣಾಮ ಜನರು ಸಹ ಚೆಲ್ಲಾಪಿಲ್ಲಿಯಾದರು. ಗ್ರಾಮಸ್ಥರು ಸೇರಿಕೊಂಡು ಕಾಡಾನೆಗಳನ್ನು ಓಡಿಸುವ ಪ್ರಯತ್ನ ಮಾಡಿದರೂ ಒಂದು ತೋಟದಿಂದ ಇನ್ನೊಂದು ತೋಟಕ್ಕೆ ಆನೆಗಳು ಓಡಿದವೇ ಹೊರತು ಅರಣ್ಯ ಪ್ರದೇಶವನ್ನು ಸೇರುವ ಪ್ರಯತ್ನ ಮಾಡಲಿಲ್ಲ.

ಕುಶಾಲನಗರದ ವಲಯ ಅಧಿಕಾರಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆನೆಗಳನ್ನು ಓಡಿಸುವ ಕೆಲಸ ಮಾಡಿದರು.
ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ತೋಟ, ಗದ್ದೆ ಮತ್ತು ಕೃಷಿ ಫಸಲಿಗೆ ಸೀಮಿತವಾಗಿತ್ತು. ಇದೀಗ ನಾಯಿ, ಮನುಷ್ಯರು ಮತ್ತು ಪಟಾಕಿಯ ಭಯವನ್ನು ಮೀರಿ ಆನೆಗಳು ರಸ್ತೆಗೆ ಬಂದು ಹಗಲಿನ ವೇಳೆಯಲ್ಲೇ ತಾನು ನಡೆದದ್ದೇ ದಾರಿ ಎಂದು ಭಯ ಹುಟ್ಟಿಸುತ್ತಿವೆ. ಸ್ಥಳೀಯರಲ್ಲಿ ಆತಂಕ ತುಂಬಿವೆ. ಅರಣ್ಯ ಇಲಾಖೆ ಹೆಚ್ಚಿನ ಜವಾಬ್ದಾರಿಯಿಂದ ಸಮಸ್ಯೆಯ ಇತ್ಯರ್ಥಕ್ಕೆ ಮುಂದಾಗಬೇಕೆಂಬುದು ಜನರ ಕೋರಿಕೆಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications