ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತಿಗೋಡಿನಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ರೌಡಿ ರಂಗ ಸಾವು

|
Google Oneindia Kannada News

ಕೊಡಗು, ಅಕ್ಟೋಬರ್.08: ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆಕ್ಯಾಂಪ್ ಬಳಿ ಕಣ್ಣನ್ನೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಲ್ಪಕ ಬಸ್ ಸಾಕಾನೆಯೊಂದಕ್ಕೆ ಡಿಕ್ಕಿ ಹೊಡೆದ ಕಾರಣ ಆನೆಯ ಸೊಂಟ ಮುರಿದು ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯ ವಿವರ:
ಮತ್ತಿಗೋಡು ಆನೆಕ್ಯಾಂಪ್ ನಲ್ಲಿರುವ ನಲವತೈದು ವರ್ಷ ಪ್ರಾಯದ ಆನೆ ರಂಗನನ್ನು ಎಂದಿನಂತೆ ರಾತ್ರಿ ತಿರುಗಾಡಲು ಬಿಡಲಾಗಿತ್ತು. ಆಗ ಅಂದಾಜು 2ಗಂಟೆ ಸುಮಾರಿಗೆ ಬಂದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆನೆಯ ಸೊಂಟ ಮುರಿದು ಸ್ಥಳದಲ್ಲೇ ಕುಸಿದು ಬಿದ್ದಿದೆ.

Elephant Ranga was died when a private bus collided

ಕಂದಾ...ಎದ್ದೇಳಮ್ಮಾ, ತಾಯಿ ಆನೆಯ ನೋವಿಗೆ ಜನರ ಕಂಬನಿಕಂದಾ...ಎದ್ದೇಳಮ್ಮಾ, ತಾಯಿ ಆನೆಯ ನೋವಿಗೆ ಜನರ ಕಂಬನಿ

ನಂತರ ಆನೆಕ್ಯಾಂಪ್ ನ ವೈದ್ಯ ಡಾ ಮುಜೀಬ್ ಮತ್ತು ಆನೆ ಮಾವುತರ ಸಹಕಾರದಿಂದ ಆನೆಯ ಶುಶ್ರೂಷೆ ನಡೆಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆನೆ ಇಂದು ಸೋಮವಾರ (ಅಕ್ಟೋಬರ್.08) ಬೆಳಗ್ಗೆ ಸಾವನ್ನಪ್ಪಿದೆ.

Elephant Ranga was died when a private bus collided

ಒಂಟಿ ಸಲಗಕ್ಕೆ ಬಲಿಯಾಗಿದ್ದ ಮಣಿಕಂದನ್ ಹೆಸರು ಕಳ್ಳಬೇಟೆ ತಡೆ ಶಿಬಿರಕ್ಕೆಒಂಟಿ ಸಲಗಕ್ಕೆ ಬಲಿಯಾಗಿದ್ದ ಮಣಿಕಂದನ್ ಹೆಸರು ಕಳ್ಳಬೇಟೆ ತಡೆ ಶಿಬಿರಕ್ಕೆ

ಈ ಆನೆಯನ್ನು ಬೆಂಗಳೂರಿನ ಬಳಿ 3 ವರ್ಷಗಳ ಹಿಂದೆ ಸೆರೆಹಿಡಿದು ಪಳಗಿಸಲಾಗಿತ್ತು. ರೌಡಿ ರಂಗ ಎಂದು ಈ ಆನೆ ಹಿಂದೆ ಕುಖ್ಯಾತಿ ಪಡೆದಿತ್ತು. ಪೊನ್ನಂಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬಸ್​ ಚಾಲಕನ ವಿಚಾರಣೆ ನಡೆಸುತ್ತಿದ್ದಾರೆ.

English summary
Elephant Ranga was died when a private bus collided. This incident occured in Mattigodu elephant camp.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X