ಕೊಡಗಿನ ನಿರಾಶ್ರಿತರ ಶಿಬಿರಗಳಲ್ಲಿ ಸಂಗೀತ, ನೃತ್ಯ, ಯೋಗ...
ಮೈಸೂರು, ಆಗಸ್ಟ್ 26: ಕೊಡಗಿನ ಜಲಪ್ರಳಯಕ್ಕೆ ತತ್ತರಿಸಿ ಇದೀಗ ಮಾನಸಿಕ ಖಿನ್ನತೆಗೆ ಒಳಗಾಗಿರುವ ನೆರೆ ಸಂತ್ರಸ್ತರ ದುಗುಡ ದೂರ ಮಾಡಿ ವಾಸ್ತವ ಬದುಕಿನತ್ತ ಕರೆ ತರಲು ಕೆಲವು ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ.
ಮಕ್ಕಳಿಂದ ಹಿಡಿದು ಅನೇಕರು ನಿರಾಶ್ರಿತರ ಶಿಬಿರಗಳಲ್ಲಿ ಸಂಗೀತ, ನೃತ್ಯ, ಭಜನೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆ ನಡೆಸುವ ಮೂಲಕ ನೋವಿನಲ್ಲಿ ನಗು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮನೆಯನ್ನು ಕಳೆದುಕೊಂಡು ಇದೀಗ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ ಮನಸ್ಸಿನ ಮೇಲಾಗಿರುವ ಅಘಾತ ನಿವಾರಿಸಲು ಎನ್ ಸಿಸಿ ಹಾಗೂ ಅನೇಕ ಎನ್ ಜಿ ಓ ಗಳ ತಂಡದ ಸದಸ್ಯರು ಮುಂದಾಗುತ್ತಿದ್ದಾರೆ.

ವಿವಿಧ ಕ್ಯಾಂಪ್ ಗಳಲ್ಲಿ ವಿವಿಧ ಚಟುವಟಿಕೆ ನಡೆಸುವ ಮೂಲಕ ಜನರ ಮನಸ್ಸಿನಲ್ಲಿರುವ ದುಗುಡ, ನೋವು, ಸಂಕಟ ಹಾಗೂ ಭಯವನ್ನು ಹೋಗಲಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಸ್ವಯಂ ಸೇವಕರು.
ಪ್ರತಿದಿನ ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕರ್ತರು ಕ್ಯಾಂಪ್ ನಲ್ಲಿದ್ದವರು ವಿವಿಧ ಚಟುವಟಿಕೆಯಲ್ಲಿ ತೊಡಗುವಂತೆ ಮಾಡುತ್ತಿದ್ದಾರೆ. ಪ್ರಾರ್ಥನೆ, ಶಿಶುಗೀತೆ, ಗಾಯನ, ಕೊಡಗು ಸಾಂಪ್ರದಾಯಿಕ ಸಂಗೀತಕ್ಕೆ ನೃತ್ಯ, ಮಕ್ಕಳಿಗೆ ಏಕಾಪಾತ್ರಾಭಿನಯ, ಚಿತ್ರಕಲೆ, ಗಾಯನ ಸ್ಪರ್ಧೆ ನಡೆಸುತ್ತಿದ್ದಾರೆ.
ಇದರಿಂದ ಅಲ್ಲಿರುವವರ ಚಿಂತೆ ದೂರವಾಗುತ್ತಿದೆ. ಮನಸ್ಸಲ್ಲಿ ಸಂತೋಷ ಮನೆ ಮಾಡುತ್ತಿದೆ.

ಕಾರ್ಯಕರ್ತ ಲಾರೆನ್ಸ್ ಪ್ರಕಾರ, ಈ ತೆರನಾದ ಕಾರ್ಯಕ್ರಮಗಳನ್ನು ಮಾಡುವುದರಿಂದ ಜನರಿಗೆ ಮನರಂಜನೆ ನೀಡಿದಂತಾಗುತ್ತದೆ. ಸ್ವಲ್ಪ ನಿರಾಳವಾಗುತ್ತಾರೆ. ಇಂದು ಭಾನುವಾರ ಇವರೆಲ್ಲರೂ ಸೇರಿ ಯಾವುದಾದರೊಂದು ಚಲನಚಿತ್ರ ತೋರಿಸಲು ತಿಳಿಸಿದ್ದಾರೆ. ಅದು ಕೂಡ ಪ್ಲಾನ್ ಮಾಡಲಾಗುತ್ತಿದೆ ಎಂದು ಸಂತಸದಿಂದಲೇ ನುಡಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications