ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ನಡುಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಅಧಿಕಾರಿಗಳು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಏಪ್ರಿಲ್ 16: ಅಕ್ರಮ ಮದ್ಯ ಮಾರಾಟ ಪರಿಶೀಲನೆಗೆ ಬಂದಿದ್ದ ಅಬಕಾರಿ ಅಧಿಕಾರಿಗಳು ಅಶ್ಲೀಲ ಪದಗಳಿಂದ ಒಬ್ಬರನ್ನೊಬ್ಬರು ನಿಂದಿಸಿಕೊಂಡು ನಡು ಬೀದಿಯಲ್ಲೇ ಬಡಿದಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

Recommended Video

ಅಯ್ಯೊ ಪಾಪ,ಮನೆಯಿಂದ ಹೊರಗಡೆ ಬಂದಿದಕ್ಕೆ ಮುಂಬೈನಲ್ಲಿ ಈ ಯುವಕರ ಸ್ಥಿತಿ ಏನಾಯ್ತು ನೋಡಿ

ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುವೆ ಜಗಳ ಉಂಟಾಗಿದ್ದು, ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಶಿವಪ್ಪ ಮೇಲೆ ನಟರಾಜ್ ಹಾಗೂ ನಟರಾಜ್ ಕಾರು ಚಾಲಕ ಮನೋಹರ್ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಲಾಕ್ ಡೌನ್ ಇರುವುದರಿಂದ ಎಲ್ಲೆಡೆ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಆದರೆ ಗ್ರಾಮೀಣ ಭಾಗದಲ್ಲಿ ಜನರು ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ದರಿಂದ ಉಪ ಅಧೀಕ್ಷಕ ಶಿವಪ್ಪ ಮತ್ತು ತಂಡ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರಕ್ಕೆ ಪರಿಶೀಲನೆಗೆ ಹೋಗಿತ್ತು.

 ವಿಡಿಯೋ ವೈರಲ್; ಬೀದಿಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಸೂಲಿ ವಿಚಾರ ವಿಡಿಯೋ ವೈರಲ್; ಬೀದಿಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಸೂಲಿ ವಿಚಾರ

Excise Department Officials Quarrel In Madikeri

ಈ ಸಂದರ್ಭ ಸ್ಥಳಕ್ಕೆ ಬಂದ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಇವರಿಬ್ಬರ ಜಗಳ ತಾರಕಕ್ಕೇರಿದೆ. ರಸ್ತೆಯಲ್ಲೇ ಅವಾಚ್ಯ ಪದಗಳಿಂದ ನಿಂದಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ.

English summary
Excise department officials quarreled on road yesterday in madikeri,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X