ತಲಕಾವೇರಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ಕಾಮಗಾರಿ: ಅಧಿಕಾರಿ ಸತೀಶ್ ಅಮಾನತು
ಮಡಿಕೇರಿ, ಅಕ್ಟೋಬರ್ 11: ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲಕಾವೇರಿ ಸಮೀಪ ಬೆಟ್ಟವನ್ನು ಸಮತಟ್ಟು ಮಾಡಿ ನಿಯಮ ಬಾಹಿರವಾಗಿ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಹಶೀಲ್ದಾರ್ ಕಚೇರಿಯ ಎಫ್ಡಿಎ ಅಧಿಕಾರಿ ಸತೀಶ್ ಅವರನ್ನು ಅಮಾನತು ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಅಧಿಕಾರಿ ಸತೀಶ್ ಮಡಿಕೇರಿ ತಾಲೂಕಿನ ತಲಕಾವೇರಿ ಸಮೀಪದ ಕೋಳಿಕಾಡು ಹಾಗೂ ಚೇರಂಗಾಲ ಗ್ರಾಮಗಳ ವ್ಯಾಪ್ತಿಯ ಸುಮಾರು 1.5 ಎಕರೆ ಬೆಟ್ಟವನ್ನು ಒತ್ತುವರಿ ಮಾಡಿ ಅರಣ್ಯ ಪ್ರದೇಶವನ್ನು ನಾಶಪಡಿಸಿದ್ದರು ಎನ್ನುವ ಆರೋಪವಿದೆ. ಅಲ್ಲದೆ ಭಾರೀ ಪ್ರಮಾಣದಲ್ಲಿ ಮಣ್ಣು ತೆರವು ಮಾಡಿದ ಪರಿಣಾಮ ಸ್ಥಳದಲ್ಲಿ ಭಾರೀ ಬಿರುಕು ಮೂಡಿ ಬೆಟ್ಟದ ತಪ್ಪಲಿನ ಕೋಳಿಕಾಡು ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು.
ಈ ಪ್ರಕರಣದ ಕುರಿತು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆಯ ಪ್ರಮುಖರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಅಲ್ಲದೆ ಭಾಗಮಂಡಲ ವಲಯ ಅರಣ್ಯ ಇಲಾಖೆ ಕಚೇರಿಯಲ್ಲೂ ಪ್ರತ್ಯೇಕ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದರು. ಬಳಿಕ ಈ ದೂರನ್ನು ಪರಿಗಣಿಸಿದ ಜಿಲ್ಲಾಧಿಕಾರಿಗಳು ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳಿಂದ ಜಂಟಿ ತನಿಖೆಗೆ ಆದೇಶ ನೀಡಿದ್ದರು.

ಜಂಟಿ ತನಿಖೆ ನಡೆಸಿದ ವಿವಿಧ ಇಲಾಖೆಗಳು ಸ್ಥಳದ ಸಮೀಕ್ಷೆ ನಡೆಸಿದಾಗ ಅಧಿಕಾರಿ ಸತೀಶ್ ಅವರಿಗೆ ಈ ಹಿಂದೆ ಮಂಜೂರಾದ ಜಾಗ ಮತ್ತು ಪ್ರಸ್ತುತ ರೆಸಾರ್ಟ್ ಕಾಮಗಾರಿ ನಡೆಸುತ್ತಿರುವ ಪ್ರದೇಶ ಬೇರೆ ಬೇರೆಯಾಗಿರುವುದು ಪತ್ತೆಯಾಗಿದೆ. ರೆಸಾರ್ಟ್ ನಿರ್ಮಾಣಕ್ಕೆ ಸ್ವಾಧೀನ ಪಡೆದಿರುವುದು ಸರ್ಕಾರಿ ಜಾಗ ಎಂಬುದು ಸ್ಪಷ್ಟವಾಗಿದೆ. ಸ್ಥಳದಲ್ಲಿದ್ದ ಹಲವಾರು ಮರಗಳನ್ನು ಕಡಿದು ನಾಶ ಮಾಡಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಈ ಅಧಿಕಾರಿಯ ವಿರುದ್ಧ ಪ್ರಕರಣವನ್ನೂ ದಾಖಲಿಸಿತ್ತು.
ಸರ್ಕಾರಿ ಜಾಗದ ಬೆಟ್ಟವನ್ನು ಒತ್ತುವರಿ ಮಾಡಿ ಅಕ್ರಮ ಕಾಮಗಾರಿ ನಡೆದಿದೆ ಎಂದು ವಿವಿಧ ಇಲಾಖೆಗಳು ನೀಡಿದ ಜಂಟಿ ವರದಿಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿ ಸತೀಶ್ ಅವರನ್ನು ಇದೀಗ ಅಮಾನತು ಮಾಡಲಾಗಿದೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications