ಕಟ್ಟಡ ಕುಸಿತದ ಭೀತಿ: ಕೊಡಗು ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ

ಮಡಿಕೇರಿ, ಆಗಸ್ಟ್ 07: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತವಾದ ಬೆನ್ನಲ್ಲೇ ಕೊಡಗು ಜಿಲ್ಲಾಧಿಕಾರಿ ಕಚೇರಿಯನ್ನು ಇಲ್ಲಿನ ನಗರ ಸಭಾ ಕಾರ್ಯಾಲಯಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

Recommended Video

      Karnataka Rain : ನದಿ ಮದ್ಯೆ ಸಿಲುಕಿದ್ದ ಕೋತಿಗಳನ್ನು ರಕ್ಷಿಸಿದ ರೋಚಕ ದೃಶ್ಯ | Oneindia Kannada

      ಹೆದ್ದಾರಿ ಪಕ್ಕದ ಗುಡ್ಡದ ಮೇಲಿರುವ ಜಿಲ್ಲಾಡಳಿತ ಭವನವನ್ನು 2014 ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಶಿಕ್ಷಣ, ಸರ್ವೇ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಜಿಲ್ಲಾ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದವು.

      14.43 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಜಿಲ್ಲಾಡಳಿತ ಭವನದಲ್ಲಿರುವ ಉಳಿದ ಇಲಾಖೆಗಳ ಕಚೇರಿಗಳನ್ನು ಸದ್ಯಕ್ಕೆ ಬಂದ್‌ ಮಾಡಲು ನಿರ್ಧರಿಸಲಾಗಿದೆ.

      Fear Of Collapse: Kodagu District Collector Office Relocates

      ಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ತಜ್ಞರ ಸಲಹೆಯ ಮೇರೆಗೆ ಈ ಭವನವನ್ನು ಮುಚ್ಚಲಾಗುವುದು ಎನ್ನಲಾಗಿದೆ. ಮಳೆ ಇಳಿಮುಖವಾಗುವವರೆಗೂ ಜಿಲ್ಲಾಧಿಕಾರಿ ನಗರಸಭೆಯ ಕಚೇರಿಯಿಂದಲೇ ಕಾರ್ಯನಿರ್ವಹಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+