ಕೊಡಗಿನಲ್ಲಿ ಪತ್ತೆಯಾಗದ ಹುಲಿಗಾಗಿ ತೀವ್ರ ಕಾರ್ಯಾಚರಣೆ; ನಿಲ್ಲದ ಉಪಟಳ
ಮಡಿಕೇರಿ, ನವೆಂಬರ್ 13: ಕೊಡಗಿನಲ್ಲಿ ಹುಲಿಯ ಉಪಟಳದಿಂದಾಗಿ ಜನ ಭಯಭೀತರಾಗಿದ್ದು, ಈಗಾಗಲೇ ದಕ್ಷಿಣಕೊಡಗಿನ ವಿರಾಜಪೇಟೆಗೆ ಸಮೀಪವಿರುವ ಮಗ್ಗುಲ, ಐಮಂಗಲ, ಚಂಬೆ ಬೆಳ್ಳೂರು, ಪುದುಕೋಟೆ, ಕುಕ್ಲೂರು ಈ ಭಾಗದಲ್ಲಿ ಒಂದು ಕಳೆದ ಒಂದು ವಾರದಿಂದ ಹುಲಿ ಅಲ್ಲಲ್ಲಿ ಕಾಣಸಿಗುತ್ತಿದ್ದು ಜನಭಯಭೀತರಾಗಿದ್ದಾರೆ. ಜತೆ, ಜತೆಗೆ ಜಾನುವಾರುಗಳನ್ನು ತಿಂದು ಹಾಕುತ್ತಿದ್ದು ಆತಂಕದಲ್ಲಿ ದಿನಕಳೆಯುವಂತಾಗಿದೆ.
ಈಗಾಗಲೇ ರಸ್ತೆ ಬದಿ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಹುಲಿ ಗೋಚರವಾಗುತ್ತಿದ್ದು ಗ್ರಾಮಸ್ಥರ ನಿದ್ದೆ ಕೆಡಿಸಿದೆ. ಅಲ್ಲದೇ ಮಗ್ಗುಲ ಮತ್ತು ಐಮಂಗಲ, ಪುದುಕೋಟೆ ಗ್ರಾಮದ ಹಲವರ ಕಾಫಿತೋಟ ಮತ್ತು ಗದ್ದೆಗಳಲ್ಲಿ ಹುಲಿಹೆಜ್ಜೆಗಳು ಕಂಡು ಬಂದಿರುವುದರಿಂದ ತೋಟಕ್ಕೆ ಹೋಗಿ ಕೆಲಸ ಮಾಡಲು ಕೂಲಿಕಾರ್ಮಿಕರು ಭಯಪಡುತ್ತಿದ್ದಾರೆ. ಇಷ್ಟರಲ್ಲಿಯೇ ಹುಲಿಯನ್ನು ಸೆರೆ ಹಿಡಿಯಲು ನಡೆಸಿದ ಕಾರ್ಯಾಚರಣೆಗಳು ಫಲಕೊಟ್ಟಿಲ್ಲ.

ಹೀಗಾಗಿ ಈ ನಿಟ್ಟಿನ್ನಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಮತ್ತು ಡಿ.ಸಿ.ಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಮಗ್ಗುಲ, ಐಮಂಗಲ ಗ್ರಾಮದಲ್ಲಿ ಹುಲಿ ಪತ್ತೆ ಕಾರ್ಯಾಚರಣೆಯನ್ನು ನವೆಂಬರ್ 8ರಂದು ಆರಂಭ ಮಾಡಿದ್ದರು. ಆಗ ಕಾಣಿಸದ ಹುಲಿ ಹೆಜ್ಜೆಗಳು ಮತ್ತು ಘರ್ಜನೆ ಈಗ ಪುದುಕೋಟೆ ಗ್ರಾಮದಲ್ಲಿ ಕೇಳಿಬಂದಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಇದೀಗ ಚಂಬೆ ಬೆಳ್ಳೂರು ಗ್ರಾಮದ ಭದ್ರಕಾಳಿ ದೇವಾಲಯದ ಬಳಿ ಸಭೆ ಸೇರಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಡಿಸಿಎಫ್ ಜಗನ್ನಾಥ್ ಮತ್ತು ಗ್ರಾಮಸ್ಥರು ಹುಲಿ ಕಾರ್ಯಚರಣೆ ಬಗ್ಗೆಗೆ ಕೆಲಹೊತ್ತು ಚರ್ಚಿಸಿದ್ದು,. ಬಳಿಕ ಭದ್ರಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿ ಬಳಿಕ ಹುಲಿ ಪತ್ತೆ ಕಾರ್ಯಾಚರಣೆ ಆರಂಭ ಮಾಡಿದ್ದಾರೆ. ಕಾರ್ಯಾಚರಣೆ ನಡೆಸುತ್ತಿರುವ ತಂಡದಲ್ಲಿ ಎಪ್ಪತ್ತು ಅರಣ್ಯ ಸಿಬ್ಬಂದಿಗಳಿದ್ದು ಏಳು ತಂಡಗಳಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಮಗ್ಗುಲ, ಐಮಂಗಲ, ಪುದುಕೋಟೆ, ಚಂಬೆಬೆಳ್ಳೂರು, ಕುಕ್ಲೂರು, ಬಿಟ್ಟಂಗಾಲ ಗ್ರಾಮದಲ್ಲಿ. ಪಟಾಕಿ ಸಿಡಿಸುತ್ತಾ, ಪಿಪೀ ಸದ್ದು ಮಾಡುತ್ತಾ ಕಾರ್ಯಾಚರಣೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಇಲ್ಲಿನ ಭದ್ರಕಾಳಿ ದೇವಾಲಯದ ಪಕ್ಕದ ತೋಟದಲ್ಲಿ ರಸ್ತೆಯಂಚಿನ್ನಲ್ಲಿಯೇ ಹುಲಿ ಹೆಜ್ಜೆಗಳು ಪತ್ತೆಯಾಗಿದ್ದು, ಈ ಸಂಬಂಧ ಮಾಹಿತಿ ನೀಡಿರುವ ಡಿಸಿಎಫ್ ಜಗನ್ನಾಥ್ ಅವರು, ಹಲವಾರು ದಿನಗಳಿಂದ ವನ್ಯಪ್ರಾಣಿಗಳ ಉಪಟಳ ಅತ್ಯಂತ ಹೆಚ್ಚಾಗಿದೆ. ಕಳೆದ ವಾರ ಮಗ್ಗುಲ ಗ್ರಾಮದಲ್ಲಿ ಹುಲಿ ಇರುವುದು ಖಾತ್ರೀ ಆಗಿದೆ.
ಕಳೆದ 15 ದಿನಗಳಿಂದ ಈ ಭಾಗದಲ್ಲಿ ಹುಲಿಯ ಚಲನವಲನ ಪತ್ತೆಯಾಗಿದೆ. ನಾವು ಈಗ ಎಪ್ಪತ್ತು ಸಿಬ್ಬಂದಿಯಿಂದ ಕಾರ್ಯಚರಣೆ ಆರಂಭಮಾಡಿದ್ದೀವಿ. ಹೆಚ್ಚುವರಿ ಆಗಿ ಬೇಕಾದರೆ ಸಿಬ್ಬಂದಿಗಳನ್ನು ಕರೆಸಿಕೊಳ್ಳುತ್ತೇವೆ. ಈ ಹುಲಿ ಕ್ಯಾಮೆರಾದಲ್ಲಿ ಟ್ರ್ಯಾಪ್ ಆದ ಕೂಡಲೇ ಸೆರೆ ಹಿಡಿಯಲು ಅನುಮತಿ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಮಾತನಾಡಿ ಈ ಭಾಗದಲ್ಲಿ ಹುಲಿ ಸಂಚಾರ ಇರುವ ಬಗ್ಗೆ ಮಾಹಿತಿ ಬಂದಿದೆ. ಅಲ್ಲದೇ ಈ ಭಾಗದಲ್ಲಿ ಕಾಡಾನೆ ಹಾವಳಿ ಕೂಡ ಜಾಸ್ತಿಯಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ನಿರ್ದೇಶನದ ಮೇರೆಗೆ ಹುಲಿ ಕಾರ್ಯಚರಣೆ ಮಾಡಲು ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಫ್ ಜಗನ್ನಾಥ್ ಅವರು ಕಾರ್ಯಾಚರಣೆ ನೇತೃತ್ವ ವಹಿಸುವುದಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.
ಕಾರ್ಯಾಚರಣೆ ಸ್ಥಳದಲ್ಲಿ ಚೆಂಬೆಬೆಳ್ಳೂರು ಗ್ರಾಮದ ಕೋಳೇರ ರನ್ನ, ಊರಿನ ಮುಖ್ಯಸ್ಥ ಚಾರಿಮಂಡ ಪ್ರಕಾಶ್, ಕೊಳುವಂಡ ಹರೀಶ್, ಉಳಿಯಡ ಜೀವನ್, ಮುತ್ತಪ್ಪ, ನಾಮನಿರ್ದೇಶನ ಪುರಸಭಾ ಸದಸ್ಯ ಶಬರೀಶ್ ಶೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ವಲಯ ಅರಣ್ಯಾಧಿಕಾರಿ ಕೆ.ವಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಆನೆ ಕಾರ್ಯಪಡೆ ಪ್ರಶಾಂತ್, ಅರಣ್ಯ ರಕ್ಷಕ ನಾಗರಾಜ್ ರಡರಟ್ಟಿ ಸೇರಿದಂತೆ ಅರಣ್ಯ ಸಿಬ್ಬಂದಿ ಇದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications