ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್‌ ತೊರೆಯಲಿದ್ದಾರೆ ಮಾಜಿ ಸಚಿವ ಬಿ.ಎ.ಜೀವಿಜಯ?

|
Google Oneindia Kannada News

ಮಡಿಕೇರಿ, ಮಾರ್ಚ್ 12 : ಮಾಜಿ ಸಚಿವ, ಕೊಡಗು ಜಿಲ್ಲಾ ಜೆಡಿಎಸ್ ನಾಯಕ ಬಿ.ಎ.ಜೀವಿಜಯ ಅವರು ಪಕ್ಷ ತೊರೆಯಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಅವರು ಪಕ್ಷ ಬಿಡಲು ಮುಂದಾಗಿರುವುದು ಪಕ್ಷಕ್ಕೆ ಜಿಲ್ಲೆಯಲ್ಲಿ ಹಿನ್ನಡೆ ಉಂಟು ಮಾಡಿದೆ.

ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರು ಬಿ.ಎ.ಜೀವಿಜಯ ಅವರು ಎರಡು ದಿನದಲ್ಲಿ ಬೆಂಬಲಿಗರೊಂದಿಗೆ ಬೆಂಗಳೂರಿಗೆ ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Election flashback: 'ದೈತ್ಯ ಸಂಹಾರಿ' ಜನತಾ ಪರಿವಾರದ ಜೀವಿಜಯElection flashback: 'ದೈತ್ಯ ಸಂಹಾರಿ' ಜನತಾ ಪರಿವಾರದ ಜೀವಿಜಯ

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಕೆ.ಎಂ.ಬಿ.ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಇದರಿಂದಾಗಿ ಜೀವಿಜಯ ಅವರು ಅಸಮಾಧಾನಗೊಂಡಿದ್ದಾರೆ. ಗಣೇಶ್ ಅವರು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ಅಗಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಬೆಂಬಲಿಗರು.

ಮೈಸೂರು-ಕೊಡಗು ಟಿಕೆಟ್‌ಗೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ!ಮೈಸೂರು-ಕೊಡಗು ಟಿಕೆಟ್‌ಗೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ!

Former minister BA Jivijaya wish to quit JDS

'2018ರ ವಿಧಾನಸಭೆ ಚುನಾವಣೆಯಲ್ಲಿ ಕೆ.ಎಂ.ಬಿ.ಗಣೇಶ್ ಅವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಬಾರದು ಎಂದು ವರಿಷ್ಠರ ಗಮನಕ್ಕೂ ತರಲಾಗಿತ್ತು. ಆದರೆ, ನಮ್ಮ ಮಾತಿಗೆ ಬೆಲೆ ಕೊಟ್ಟಿಲ್ಲ' ಎಂದು ಜೀವಿಜಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಡಗಿನವರನ್ನು ಕಾಡುತ್ತಿದೆ ಹತ್ತಾರು ಸಮಸ್ಯೆಗಳು..!ಕೊಡಗಿನವರನ್ನು ಕಾಡುತ್ತಿದೆ ಹತ್ತಾರು ಸಮಸ್ಯೆಗಳು..!

2018ರ ವಿಧಾನಸಭೆ ಚುನಾವಣೆಗೆ ಬಿ.ಎ.ಜೀವಿಜಯ ಅವರು ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 54,616 ಮತಗಳನ್ನು ಪಡೆದು ಬಿಜೆಪಿಯ ಅಪ್ಪಚ್ಚು ರಂಜನ್ ಅವರ ವಿರುದ್ಧ ಸೋಲು ಅನುಭವಿಸಿದ್ದರು.

English summary
Former minister and Kodagu JD(S) leader B.A.Jivijaya wish to quit party. He is upset with party leaders after K.M.B.Ganesh appointed as Kodagu district party president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X