ಗ್ರಾ.ಪಂ ಚುನಾವಣೆ: ಜೈಲಿನಿಂದಲೇ ಸ್ಪರ್ಧಿಸಿ ಗೆಲುವು ಸಾಧಿಸಿದ ಅಭ್ಯರ್ಥಿ
ಮಡಿಕೇರಿ, ಡಿಸೆಂಬರ್ 30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಡಿ.30 ರಂದು ಪ್ರಕಟವಾಗಿದ್ದು, ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿಯ ಎಮ್ಮೆಗುಂಡಿ ಕ್ಷೇತ್ರದಲ್ಲಿ ಪುಲಿಯಂಡ ಬೋಪಣ್ಣ ಗೆಲುವು ಸಾಧಿಸಿದ್ದಾರೆ.
ಪಾಲಿಬೆಟ್ಟ ಎಮ್ಮೆಗುಂಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪುಲಿಯಂಡ ಬೋಪಣ್ಣ, ಜೈಲಿನಿಂದಲೇ ನಾಮಪತ್ರ ಸಲ್ಲಿಸಿ ಸುದ್ದಿಯಾಗಿದ್ದರು. ಬುಧವಾರ ವಿರಾಜಪೇಟೆಯಲ್ಲಿ ಮತ ಎಣಿಕೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಬೋಪಣ್ಣ ಗೆಲುವಿನ ನಗೆ ಬೀರಿದ್ದಾರೆ.
ಹಿಂದಿನಂತೆ ಈ ಬಾರಿಯೂ ಚುನಾವಣೆಗೆ ನಿಲ್ಲುವ ತಯಾರಿ ನಡೆಸುತ್ತಿರುವಾಗ ಇವರ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಈ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಯತ್ನಿಸಿದರೂ ಜಾಮೀನು ಇನ್ನೂ ಸಿಕ್ಕಿರಲಿಲ್ಲ. ನಂತರ ನ್ಯಾಯಾಲಯದಿಂದ ಒಪ್ಪಿಗೆ ಪಡೆದು ಜೈಲಿನಿಂದಲೇ ಗ್ರಾ.ಪಂ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಗ್ರಾ.ಪಂ ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ನ್ಯಾಯಾಲಯದಿಂದ ಬೇಲ್ ಪಡೆದು, ಜನರ ಬಳಿ ತೆರಳಿ ಮತಯಾಚಿಸಿದ್ದರು. ಪಾಲಿಬೆಟ್ಟ್ ಗ್ರಾಮ ಪಂಚಾಯತಿಯಲ್ಲಿ ಸಾಕಷ್ಟು ಅಭಿವೃದ್ಧಿಗೆ ಕೆಲಸ ಮಾಡಿರುವ ಬೋಪಣ್ಣ ಅವರು, ರಾಷ್ಟ್ರ ಮಟ್ಟದಲ್ಲಿ ಗ್ರಾಮ ಪಂಚಾಯತಿಗೆ ಪ್ರಶಸ್ತಿ ಬರಲು ಶ್ರಮಿಸಿದ್ದರು. ಹೀಗಾಗಿ ಪುಲಿಯಂಡ ಬೋಪಣ್ಣ ಬೆಂಬಲಕ್ಕೆ ಮತದಾರರು ನಿಂತಿದ್ದಾರೆ ಎಂದು ಹೇಳಬಹುದು.
ಬೋಪಣ್ಣ ಅವರು ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೂಸುಫ್ ಅವರನ್ನು 66 ಮತಗಳಿಂದ ಸೋಲಿಸಿ ಆಯ್ಕೆ ಆಗಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications