ಮಡಿಕೇರಿ: ಹದಿನೆಂಟು ಮೆಟ್ಟಿಲ ಮೇಲೆ ವಿರಾಜಮಾನನಾದ ಗಣಪ
ಮಡಿಕೇರಿ, ಸೆಪ್ಟೆಂಬರ್ 16: ಹಲವು ದಶಕಗಳಿಂದ ಗಣೇಶ ಚತುರ್ಥಿಗೆ ಗಣಪತಿ ಪ್ರತಿಷ್ಠಾಪಿಸಿ, ನಿತ್ಯ ಪೂಜಿಸುತ್ತಾ ಬರುತ್ತಿರುವ ನಗರದ ಕೆಎಸ್ಆರ್ ಟಿಸಿ ಡಿಪೋ ಬಳಿಯ ಶಾಂತಿನಿಕೇತನ ಬಡಾವಣೆಯ ಶಾಂತಿನಿಕೇತನ ಯುವಕ ಸಂಘವು ಪ್ರತಿ ವರ್ಷ ವಿಭಿನ್ನತೆ ರೂಢಿಸಿಕೊಂಡಿರುವುದನ್ನು ಕಾಣಬಹುದು.
ವರ್ಷದಿಂದ ವರ್ಷಕ್ಕೆ ಪ್ರತಿಷ್ಠಾಪನೆ ವೇಳೆ ವಿಭಿನ್ನ ಹಾಗೂ ವಿಶಿಷ್ಟತೆಯನ್ನು ಮೆರೆಯುತ್ತಿರುವ ಸಂಘವು ಭಕ್ತಿಗೂ ಪ್ರಾಧಾನ್ಯ ನೀಡಿದೆ. ಪ್ರತಿಷ್ಠಾಪನೆ ಬಳಿಕ ವಿಸರ್ಜನೆ ತನಕ ಒಂದಲ್ಲ ಒಂದು ಕಾರ್ಯಕ್ರಮವನ್ನು ಮಾಡುತ್ತಾ ಬರುತ್ತಿದೆ. ಆ ಮೂಲಕ ಪ್ರತಿಭೆಗಳಿಗೆ ವೇದಿಕೆಯನ್ನು ಒದಗಿಸಿಕೊಡುತ್ತಿದೆ.[ಶಾಸ್ತ್ರಬದ್ಧವಾಗಿ ಗಣಪತಿಯನ್ನು ವಿಸರ್ಜಿಸುವ ಕ್ರಮ]

ಕೊಡಗಿನಲ್ಲಿ ಕಲಾಕೃತಿಗಳಿಗೆ ಹೆಚ್ಚಿನ ಆದ್ಯತೆ. ದಸರಾ ಮಾದರಿಯಲ್ಲಿ ನಡೆಯುವ ಇಲ್ಲಿನ ವಿಸರ್ಜನಾ ಮೆರವಣಿಗೆಯು ನೋಡುಗರ ಮನ ಸೆಳೆಯುತ್ತದೆ. ಪ್ರತಿಷ್ಠಾನೆಗೊಂಡ ಗಣಪತಿಯನ್ನು ಭವ್ಯ ವಿದ್ಯುತ್ ಅಲಂಕೃತ ಮಂಟಪದಲ್ಲಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

ಭವ್ಯವಾದ ಅಯ್ಯಪ್ಪ ಸ್ವಾಮಿಯ ಹದಿನೆಂಟು ಮೆಟ್ಟಿಲುಗಳಂತೆ ಇದೀಗ ಗಣಪತಿಗೆ ದೇಗುಲ ನಿರ್ಮಿಸಿ ಪ್ರತಿಷ್ಠಾಪಿಸಲಾಗಿದ್ದು, ನೋಡುಗರಿಗೆ ಶಬರಿಮಲೆಯ ಕಲ್ಪನೆ ಮೂಡಿಸುತ್ತಿದೆ. ಪಕ್ಕದಲ್ಲಿಯೇ ವಿವಿಧ ದೇವಾನುದೇವತೆಗಳ ಕಲಾಕೃತಿಗಳು, ಜಾಂಬವಂತ, ಆನೆ ಇನ್ನಿತರ ಪ್ರಾಣಿಗಳ ಪ್ರತಿಕೃತಿಗಳು ಕಣ್ಮನ ಸೆಳೆಯುತ್ತವೆ.[ಗಣೇಶನ ಹಬ್ಬಕ್ಕೆ ಬದಲಾವಣೆ ನಿಮ್ಮಿಂದಲೇ ಆರಂಭವಾಗಲಿ!]

ಸಂಘದ ಅಧ್ಯಕ್ಷ ಚೇತನ್ ನೇತೃತ್ವದ ತಂಡ ಉತ್ಸವವನ್ನು ಉತ್ತಮವಾಗಿ ನಡೆಸುತ್ತಿದ್ದು, ಉತ್ಸವ ಮೂರ್ತಿಗಳ ವಿಸರ್ಜನೋತ್ಸವ ಶನಿವಾರ (ಸೆ. 17) ಅದ್ಧೂರಿ ಮೆರವಣಿಗೆಯೊಂದಿಗೆ ನಡೆಯಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications