ದುಸ್ಥಿತಿಯಲ್ಲಿ ಮಡಿಕೇರಿಯ ಅಬ್ಬಿ ಜಲಪಾತದ ತೂಗುಸೇತುವೆ!
ಮಡಿಕೇರಿ, ಆಗಸ್ಟ್ 4: ಕೊಡಗಿನಲ್ಲಿರುವ ಪ್ರಮುಖ ಪ್ರವಾಸಿ ತಾಣ ಅಬ್ಬಿ ಜಲಪಾತಕ್ಕೆ ಲಕ್ಷಾಂತರ ಪ್ರವಾಸಿಗರು ಪ್ರತಿವರ್ಷ ಭೇಟಿ ನೀಡುತ್ತಾರೆ. ಹೀಗೆ ಬರುವ ಪ್ರವಾಸಿಗರು ಇಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ಮೇಲೆ ನಿಂತು ಜಲಧಾರೆಯ ಸೌಂದರ್ಯವನ್ನು ವೀಕ್ಷಿಸುತ್ತಾರೆ.
ಈ ಸೇತುವೆಯೀಗ ದುಸ್ಥಿತಿಗೆ ತಲುಪಿದ್ದು ಗುರುವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸೇತುವೆ ನಿರ್ಮಾಣವಾಗಿ ಹೆಚ್ಚು ವರ್ಷಗಳಾಗಿಲ್ಲ. ಆದರೆ ಈಗಲೇ ಇದು ದುಸ್ಥಿತಿಗೆ ತಲುಪಿದೆ. ಈ ಬಗ್ಗೆ ಕಳೆದ ವರ್ಷದಿಂದಲೇ ದೂರುಗಳಿತ್ತು. ಆದರೆ ಸೇತುವೆಯನ್ನು ದುರಸ್ತಿ ಮಾಡುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿರಲಿಲ್ಲ. ಈಗ ಸೇತುವೆಯನ್ನು ದುರಸ್ತಿ ಮಾಡದೆ ಹೋದರೆ ಮುಂದಿನ ದಿನಗಳಲ್ಲಿ ಭಾರೀ ಅನಾಹುತಗಳಾಗುವ ಸಾಧ್ಯತೆಯಿತ್ತು. ಏಕೆಂದರೆ ತೂಗುಸೇತುವೆಯ ಮೆಟ್ಟಿಲುಗಳು, ಚೈನ್ಲಿಂಕ್ ಬೇಲಿ ಎಲ್ಲವೂ ಹಾಳಾಗಿತ್ತು.
ಈ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ತೂಗುಸೇತುವೆಯ ದುರಸ್ತಿಗೆ ಮುಂದಾಗಿದೆ. ಹೀಗಾಗಿ ಅಬ್ಬಿಜಲಪಾತದ ಬಳಿಗೆ ತೆರಳಿ ಶಿಥಿಲಾವಸ್ಥೆಯಲ್ಲಿರುವ ತೂಗುಸೇತುವೆಯನ್ನು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಸಿ.ಜಗನ್ನಾಥ, ತೂಗು ಸೇತುವೆ ನಿರ್ಮಾಣದಲ್ಲಿ ಪ್ರಸಿದ್ಧಿ ಪಡೆದಿರುವ ಸುಳ್ಯದ ಗಿರೀಶ್ ಭಾರಧ್ವಾಜ್ ಸಂಸ್ಥೆಯ ಶಿವಶಂಕರ್, ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಇಂಜಿನಿಯರ್ ಪಾಂಡುರಂಗ, ಪ್ರಮೋದ್ ಅವರು ಪರಿಶೀಲನೆ ನಡೆಸಿದ್ದಾರೆ.

ತೂಗು ಸೇತುವೆ ದುರಸ್ತಿ ನವೀಕರಣ ಸಂಬಂಧಿಸಿದಂತೆ ಸುಮಾರು 23 ಲಕ್ಷ ರೂ. ಅಂದಾಜು ವೆಚ್ಚದ ಪಟ್ಟಿಯನ್ನು ತಯಾರಿಸಲಾಗಿದ್ದು, ಈ ಸಂಬಂಧ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ತಿಳಿಸಿದ್ದಾರೆ.
ಶಿಥಿಲಗೊಂಡಿರುವ ತೂಗು ಸೇತುವೆ, ಮೆಟ್ಟಿಲುಗಳು, ಚೈನ್ಲಿಂಕ್ ಬೇಲಿ ನಿರ್ಮಾಣ ಇತರ ಕಾಮಗಾರಿ ಎಲ್ಲವೂ ಇದೇ ವೇಳೆ ನಡೆಯಲಿದ್ದು, ಎಲ್ಲವೂ ಸುಸೂತ್ರವಾಗಿ ನೆರವೇರಿದರೆ ಮುಂದಿನ ದಿನಗಳಲ್ಲಿ ಪ್ರವಾಸಿಗರು ನೆಮ್ಮದಿಯಾಗಿ ತೂಗುಸೇತುವೆಯಲ್ಲಿ ನಿಂತು ಜಲಧಾರೆಯ ಸೊಬಗನ್ನು ಸವಿಯಲು ಅನುಕೂಲವಾಗಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications