ಹಾರಂಗಿ ಜಲಾಶಯ ಮುಂಭಾಗ ತೂಗು ಸೇತುವೆ ನಿರ್ಮಾಣ: ಸ್ಥಳ ಪರಿಶೀಲನೆ
ಮಡಿಕೇರಿ, ಆಗಸ್ಟ್ 03: ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆಯ ಪ್ರಮುಖ ಜಲಾಶಯ ಹಾಗೂ ಪ್ರವಾಸಿ ತಾಣ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ.
ಈ ಸಂಬಂಧ ತೂಗು ಸೇತುವೆಯ ಜನಕ ಎಂದೇ ಪ್ರಸಿದ್ಧವಾಗಿರುವ ಗಿರೀಶ್ ಭಾರದ್ವಾಜ್ ಪುತ್ರ ಪತಂಜಲಿ ಭಾರದ್ವಾಜ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಾರಂಗಿ ಜಲಾಶಯ ಭರ್ತಿಯಾದ ಸಂದರ್ಭ ನಾಲ್ಕು ಕ್ರಸ್ಟ್ಗೇಟ್ಗಳ ಮೂಲಕ ಹೊರಬಿಡುವ ನೀರಿನ ನಯನ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಣೆಕಟ್ಟೆ ಮುಂಭಾಗ ಹರಿಯುವ ನದಿ ದಂಡೆಯ ಮೇಲೆ ತೂಗುಸೇತುವೆ ನಿರ್ಮಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ ನೀಡಿದ್ದರು.
ಅದರಂತೆ ಅಂದಾಜು 3.5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್ ತಿಳಿಸಿದ್ದಾರೆ.

ಹಾರಂಗಿ ಜಲಾಶಯ ಭರ್ತಿಯಾದ ವೇಳೆ ಗರಿಷ್ಠ ಒಂದು ಲಕ್ಷ ಕ್ಯುಸೆಕ್ ಪ್ರಮಾಣದ ನೀರು ಹೊರಬಿಡುವ ಸಾಮರ್ಥ್ಯವಿದ್ದು, 22 ಸಾವಿರ ಕ್ಯುಸೆಕ್ ನೀರು ಬಿಟ್ಟ ಸಂದರ್ಭದಲ್ಲಿ ಜಲಾಶಯದ ಕೆಳಗಿರುವ ಸೇತುವೆ ಮುಳುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನೂತನ ಮಾದರಿಯ ತೂಗು ಸೇತುವೆ ನಿರ್ಮಿಸಿ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಚಿಂತನೆ ನಡೆಸಲಾಗಿದೆ.
ಹಾರಂಗಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ತೂಗು ಸೇತುವೆಯು ಅಣೆಕಟ್ಟೆಯಿಂದ ಸುಮಾರು 300 ಮೀಟರ್ ಅಂತರದಲ್ಲಿರಲಿದ್ದು, 160 ಮೀಟರ್ ಉದ್ದ, 3.5 ಮೀಟರ್ ಎತ್ತರ, 1.5 ಮೀ ಅಗಲವಿರಲಿದ್ದು, ಈ ಸೇತುವೆ ನಿರ್ಮಾಣ ಕಾಮಗಾರಿಗೆ ಪತಂಜಲಿ ಭಾರದ್ವಾಜ್ರಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
"ಸೇತುವೆ ಮೇಲೆ ಹೆಚ್ಚಿನ ಪ್ರಮಾಣದ ಪ್ರವಾಸಿಗರು ಏಕಕಾಲದಲ್ಲಿ ನಿಂತು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ಅಧುನಿಕ ತಂತ್ರಜ್ಞಾನ ಮತ್ತು ಗುಣಮಟ್ಟದ ಸದೃಢವಾದ ಆಕರ್ಷಕ ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ನೀಲನಕ್ಷೆ ಮತ್ತು ವಿವರವಾದ ಯೋಜನಾ ವರದಿಯನ್ನು ಕಾವೇರಿ ನೀರಾವರಿ ನಿಗಮದ ಕೇಂದ್ರ ಸ್ಥಾನಕ್ಕೆ ಮತ್ತು ಸರ್ಕಾರಕ್ಕೆ ಕಳುಹಿಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಶಾಸಕರ ಸೂಚನೆಯಂತೆ ನಡೆಸಲಾಗುತ್ತಿದೆ,'' ಎಂದು ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ಹೇಳಿದ್ದಾರೆ.

ಕೋವಿಡ್ ಲಾಕ್ಡೌನ್ ಸಡಿಲಗೊಂಡ ನಂತರದಲ್ಲಿ ಕೊಡಗು ಜಿಲ್ಲೆಗೆ ರಾಜ್ಯ ಮತ್ತು ಬೇರೆ ರಾಜ್ಯಗಳಿಂದ ಅಧಿಕ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಾದ ರಾಜಾಸೀಟ್, ದುಬಾರೆ ಆನೆ ಶಿಬಿರ, ನಿಸರ್ಗಧಾಮ ಮುಂತಾದವುಗಳನ್ನು ವೀಕ್ಷಿಸಿ ಹಾರಂಗಿಗೆ ಭೇಟಿ ನೀಡುತ್ತಾರೆ.
ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಿಂದ ಈಗಾಗಲೇ ಹಾರಂಗಿಯಲ್ಲಿ ಉದ್ಯಾನವನ ಮತ್ತು ಸಂಗೀತ ಕಾರಂಜಿ ವ್ಯವಸ್ಥೆ ಮಾಡಲಾಗಿದೆ. ಮಳೆಗಾಲದ ಮೂರು ತಿಂಗಳಲ್ಲಿ ಹಾರಂಗಿ ಅಣೆಕಟ್ಟೆಯಿಂದ ನದಿಗೆ ಹರಿಯುವ ನೀರಿನ ವೀಕ್ಷಣೆಗೆ ರಾಜ್ಯದಲ್ಲೇ ಪ್ರಥಮವಾಗಿ ಅಣೆಕಟ್ಟೆ ಎದುರು ನಿಂತು ವೀಕ್ಷಿಸಲು ಅವಕಾಶ ಕಲ್ಪಿಸುವಂತೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಳೆದ ವಾರದ ಹಿಂದೆ ಹಾರಂಗಿಗೆ ಭೇಟಿ ನೀಡಿದ ಸಂದರ್ಭ ಸಲಹೆ ಮಾಡಿದ್ದರು.
ಅದರಂತೆ ತೂಗು ಸೇತುವೆ ನಿರ್ಮಾಣದಲ್ಲಿ ಪರಿಣತಿ ಹೊಂದಿರುವ, ಇದುವರೆಗೆ 145 ಸೇತುವೆಗಳನ್ನು ನಿರ್ಮಿಸಿರುವ ಗಿರೀಶ್ ಭಾರದ್ವಾಜ್ ಮತ್ತು ಪತಂಜಲಿ ಭಾರದ್ವಾಜ್ ತಂಡ 146ನೇ ತೂಗು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ರಾಜ್ಯ ಸರ್ಕಾರದ ಅನುಮತಿ ದೊರೆತು, ಶೀಘ್ರದಲ್ಲಿ ಹಣ ಬಿಡುಗಡೆಯಾದರೆ ಮುಂದಿನ 2022ರ ಒಳಗಾಗಿ ಹಾರಂಗಿ ಜಲಾಶಯದ ತೂಗುಸೇತುವೆ ಲೋಕಾರ್ಪಣೆಗೊಳ್ಳಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications