ಪ್ರವಾಸಿಗರಿಗೆ ತೆರೆದುಕೊಂಡ ಹಾರಂಗಿ ಜಲಾಶಯ, ಉದ್ಯಾನ
ಮಡಿಕೇರಿ, ನವೆಂಬರ್ 16: ಅನ್ ಲಾಕ್ 5.0 ನಂತರವೂ ಬಂದ್ ಆಗಿದ್ದ ಜಿಲ್ಲೆಯ ಪ್ರವಾಸಿ ತಾಣ ಹಾರಂಗಿಯನ್ನು ಸೋಮವಾರ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ.
ಸೆಪ್ಟೆಂಬರ್ ತಿಂಗಳ ನಂತರ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಹಾರಂಗಿಯ ಉದ್ಯಾನ ಹಾಗೂ ಸಂಗೀತ ಕಾರಂಜಿಗೆ ಭೇಟಿ ನೀಡಲು ಅವಕಾಶವಿರಲಿಲ್ಲ. ಇದೀಗ ಸ್ಥಳೀಯರ ಒತ್ತಾಯದ ಮೇರೆಗೆ ಕಾವೇರಿ ನೀರಾವರಿ ನಿಗಮ ಪ್ರವೇಶ ಧನ ನಿಗದಿಪಡಿಸಿ ಭೇಟಿಗೆ ಅವಕಾಶ ಕಲ್ಪಿಸಿದೆ.
ಜಿಲ್ಲೆಗೆ ಬಂದ ಪ್ರವಾಸಿಗರು, ಹಾರಂಗಿ ಜಲಾಶಯ ನೋಡಲಾಗದೇ ನಿರಾಸೆಯಿಂದ ಮರಳುತ್ತಿದ್ದರು. ಹಾರಂಗಿ ಪ್ರವಾಸಿ ತಾಣ ಬಂದ್ ಮಾಡಿದ್ದರಿಂದ ಸ್ಥಳೀಯ ವ್ಯಾಪಾರಿಗಳಿಗೂ ತೊಂದರೆಯಾಗಿತ್ತು. "ಸರ್ಕಾರವೇ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದ್ದರೂ, ಹಾರಂಗಿ ಇಲಾಖೆ ಅಧಿಕಾರಿಗಳು ಮಾತ್ರ ಪ್ರೋತ್ಸಾಹಿಸುತ್ತಿಲ್ಲ. ಪ್ರವಾಸಿ ತಾಣಗಳಲ್ಲಿ ಚಿಕ್ಕಪುಟ್ಟ ವ್ಯಾಪಾರ ಮಾಡಿಕೊಂಡು ಬದುಕುತ್ತಿದ್ದ ನಾವು, ಉದ್ಯಾನವನ ಮುಚ್ಚಿರುವುದರಿಂದ ಪ್ರವಾಸಿಗರು, ವ್ಯಾಪಾರವಿಲ್ಲದೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದೇವೆ'' ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದರು. ಹೀಗಾಗಿ, ಪ್ರವಾಸಿಗರು ಹಾಗೂ ಸ್ಥಳೀಯರ ಒತ್ತಡಕ್ಕೆ ಮಣಿದ ಕಾವೇರಿ ನೀರಾವರಿ ನಿಗಮ ಹಾರಂಗಿ ಪ್ರದೇಶವನ್ನು ಮುಕ್ತಗೊಳಿಸಿದೆ. ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಇಲ್ಲಿಗೆ ಭೇಟಿ ನೀಡಬಹುದು ಎಂದು ತಿಳಿಸಿದೆ.

ಆದರೆ ಉಚಿತವಾಗಿದ್ದ ಪ್ರವೇಶಕ್ಕೆ ಈಗ ಶುಲ್ಕ ವಿಧಿಸಲಾಗಿದೆ. ವಯಸ್ಕರಿಗೆ 10 ರೂ, 6-12 ವರ್ಷದ ಮಕ್ಕಳಗೆ 5 ರೂ, ಭಾರೀ ವಾಹನಗಳ ಪಾರ್ಕಿಂಗ್ ಗೆ 100 ರೂ, ಕಾರು, ಜೀಪ್, ಆಟೋ ಪಾರ್ಕಿಂಗ್ ಗೆ 25 ರೂಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ದಿನ ಸಂಜೆ 7.30ರಿಂದ ಸಂಗೀತ ಕಾರಂಜಿ ಪ್ರದರ್ಶನವೂ ಇರಲಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications