ಡೆಡ್ ಸ್ಟೋರೇಜ್ ತಲುಪಿದ ಕೊಡಗಿನ ಹಾರಂಗಿ ಜಲಾಶಯ
ಕೊಡಗು, ಜೂನ್ 22: ಕಳೆದ ವರ್ಷದ ಮಳೆಯ ಅವಾಂತರದಿಂದ ಮಳೆ ಅಂದರೆ ಕೊಡಗಿನ ಜನ ಭಯಪಡುತ್ತಿದ್ದರು. ಆದರೆ ಈ ವರ್ಷ ಮಾತ್ರ ಮಳೆಯ ಕೊರತೆಯಿಂದಾಗಿ ಜಿಲ್ಲೆಯ ಏಕೈಕ ಹಾರಂಗಿ ಜಲಾಶಯ ಬರಿದಾಗಿದೆ. ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.
ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಸದ್ಯದ ಚಿತ್ರಣ ಇದು. ಕಳೆದ ಬಾರಿ ರಣಭೀಕರ ಮಳೆಯಿಂದ ಅತಿವೃಷ್ಟಿ ಸೃಷ್ಟಿಯಾಗಿತ್ತು. ಆದರೀಗ ಇಲ್ಲಿನ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದೆ.

ಕಳೆದ ವರ್ಷ ಇಂದಿನ ದಿನಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಏನೇನೂ ಮಳೆ ಆಗಿಲ್ಲ. ಇದರ ಪರಿಣಾಮದಿಂದಾಗಿ ಹಾರಂಗಿ ಜಲಾಶಯದಲ್ಲಿ ನೀರು ಸಂಗ್ರಹಣೆಯಾಗಿಲ್ಲ. ಕಳೆದ ಬಾರಿ ಈ ಸಮಯಕ್ಕೆ ಬರೋಬ್ಬರಿ 1000 ಮಿ.ಮಿ. ಮಳೆಯಾಗಿತ್ತು. ಪರಿಣಾಮ ಹಾರಂಗಿ ಜಲಾಶಯಕ್ಕೆ 3.5 ಟಿಎಂಸಿ ನೀರು ಹರಿದು ಬಂದಿತ್ತು. ಆದರೆ ಈ ವರ್ಷ ಇದುವರೆಗೆ ಕೇವಲ 200 ಮಿಮೀ ಮಾತ್ರವೇ ಮಳೆಯಾಗಿದೆ. ಪರಿಣಾಮ ಕೇವಲ 277 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಡ್ಯಾಮ್ ನಲ್ಲಿ ಕೇವಲ 1.5 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ 2 ಟಿಎಂಸಿ ನೀರು ಕಡಿಮೆಯಾಗಿದೆ. ಜಲಾಶಯದಲ್ಲಿ ನೀರು ಡೆಡ್ ಸ್ಟೋರೆಜ್ ತಲುಪಿದೆ.
ಹಾರಂಗಿ ಜಲಾಶಯದ ನೀರನ್ನ ಮೈಸೂರು, ಹಾಸನ, ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ 11 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದ ರೈತರು ಅವಲಂಬಿಸಿದ್ದಾರೆ. ಜಲಾಶಯದಲ್ಲಿ ನೀರು ಕಡಿಮೆಯಾಗಿರೋದು ವಿದ್ಯುತ್ ಉತ್ಪಾನೆಗೂ ಹಿನ್ನಡೆಯಾಗಿದೆ.
ಹಾರಂಗಿ ಜಲಾಶಯದ ನೀರು ನಂಬಿರೋ ರೈತರು ಆತಂಕದಲ್ಲಿದ್ದಾರೆ. ಕಳೆದ ಬಾರಿಯ ಜಲಪ್ರಳಯದಿಂದ ಜಲಾಶಯ ಬಹುತೇಕ ಹೂಳಿನಿಂದ ತುಂಬಿದೆ. ಹೂಳು ತುಂಬಿರೋ ಜಲಾಶಯದಲ್ಲಿ ಕಡಿಮೆ ನೀರು ಸಂಗ್ರಹವಾಗುತ್ತದೆ. ಹೀಗಾಗಿಯೇ ಜಲಾಶಯದಲ್ಲಿ ಹೂಳು ತೆಗೆಯಬೇಕು ಅನ್ನೋ ಕೂಗು ಕೇಳಿ ಬಂದಿತ್ತು. ಅದಕ್ಕೆ ಸರ್ಕಾರ ಕೂಡ ಅಸ್ತು ಎಂದಿತ್ತು. ಹಾರಂಗಿ ಜಲಾಶಯ ಕೊಡಗಿಗಿಂತ ಕೆಆರ್ ಎಸ್ ಅವಲಂಭಿಸಿರೋರಿಗೆ ಹೆಚ್ಚು ಉಪಯೋಗಕರವಾಗಿದ್ದು, ಇಲ್ಲಿ ನೀರು ಸಂಗ್ರಹಣೆ ಕಡಿಮೆಯಾದರೇ ಎಫೆಕ್ಟ್ ಕಾವೇರಿ ನೀರನ್ನು ನಂಬಿರೋ ನದಿಪಾತ್ರದ ಜನರಿಗೂ ತಟ್ಟಲಿದೆ. ಅಷ್ಟೇ ಅಲ್ಲದೆ ಇದೇ ಪರಿಸ್ಥಿತಿ ಮುಂದುವರೆದರೆ ಕುಡಿಯೋ ನೀರಿಗೂ ಸಮಸ್ಯೆಯಾಗುವಲ್ಲಿ ಅನುಮಾನವಿಲ್ಲ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications