ಭರ್ತಿಯಾದ ಕೊಡಗಿನ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಣೆ
ಕೊಡಗು, ಆಗಸ್ಟ್ 4: ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಅವರು, "ಹಾರಂಗಿಯಿಂದ ಕಾಲುವೆಗಳಿಗೆ ಶೀಘ್ರ ನೀರುಹರಿಸಿ ರೈತರ ಬೆಳೆಗಳಿಗೆ ಅನುಕೂಲ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು".

ಕಾಲುವೆಗಳಿಗೆ ನೀರು ಬಿಡುವ ಸಂಬಂಧ ತುರ್ತಾಗಿ ಸಭೆ ಆಹ್ವಾನಿಸಬೇಕು. ಕಾವೇರಿ ಕಣಿವೆಯಲ್ಲಿ ಇನ್ನೂ ಹೆಚ್ಚಿನ ಮಳೆಯಾಗಿ ಕೃಷ್ಣರಾಜ ಮತ್ತು ಹೇಮಾವತಿ ಜಲಾಶಯ ಭರ್ತಿಯಾಗಿ ನಾಡಿನ ಜನತೆಗೆ ಒಳಿತಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದರು.
ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವುದರಿಂದ ಇಲ್ಲಿನ ಮೂಲ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಂ ಅವರೊಂದಿಗೆ ಬಾಗಿನ ಅರ್ಪಿಸಲು ದಿನಾಂಕ ನಿಗದಿಯಾಗಿತ್ತು,

ಆದರೆ ಕಾರಣಾಂತರದಿಂದ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲು ಸಾಧ್ಯವಾಗಿಲ್ಲ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಲಾಶಯದ ನೀರಿನ ಮಟ್ಟ: ಹಾರಂಗಿ ವ್ಯಾಪ್ತಿಯಲ್ಲಿ 15.2 ಮಿ.ಮೀ. ಮಳೆ ಸುರಿದಿದ್ದು, ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಪೈಕಿ ಶುಕ್ರವಾರ ನೀರಿನ ಮಟ್ಟ 2858.28 ಅಡಿ ಇದೆ.

ನೀರಿನ ಒಳ ಹರಿವು 4018 ಕ್ಯೂಸೆಕ್ಸ್ ಹಾಗೂ ಹೊರಹರಿವು 3,000 ಕ್ಯೂಸೆಕ್ಸ್, ಸಧ್ಯ ನಾಲೆಗೆ 50 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications