ಕೊಡಗಿನಲ್ಲಿ ಮುಂದುವರೆದ ಮಳೆ... ಹಾರಂಗಿ ಜಲಾಶಯದಲ್ಲಿ ಹೆಚ್ಚಿದ ನೀರಿನ ಪ್ರಮಾಣ
ಮಡಿಕೇರಿ, ಜುಲೈ 6: ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಈಗಾಗಲೇ ಪುನರ್ವಸು ನಕ್ಷತ್ರದ ಮಳೆ ಆರಂಭವಾಗಿರುವ ಕಾರಣ ಮಳೆ ತುಸು ಬಿರುಸುಗೊಳ್ಳುತ್ತಿದ್ದು, ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದೆ.
Recommended Video
ಸಾಮಾನ್ಯವಾಗಿ ಮಳೆಗಾಲದ ಈ ಸಮಯದಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿತ್ತು. ಕಳೆದ ಎರಡು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಧಾರಾಕಾರವಾಗಿ ಮಳೆ ಸುರಿದು ಅನಾಹುತಗಳಾಗುತ್ತಿವೆ. ಈ ಬಾರಿಯೂ ಇಲ್ಲಿನ ಜನ ಅದೇ ಭಯದಲ್ಲಿದ್ದಾರೆ.
ಕಳೆದ ಬಾರಿಗೆ ಹೋಲಿಸಿದರೆ ಜನವರಿಯಿಂದ ಇಲ್ಲಿವರೆಗೆ ಹೆಚ್ಚು ಮಳೆ ಸುರಿದಿದೆ. ಕಳೆದ ವರ್ಷ ಈ ಸಮಯದಲ್ಲಿ 398 ಮಿ.ಮೀ. ಮಳೆ ಸುರಿದಿದ್ದರೆ, ಈ ಬಾರಿ 475ಮಿ.ಮೀ. ಮಳೆ ಸುರಿದಿದೆ. ಕಳೆದ ವರ್ಷಕ್ಕಿಂತ 77ಮಿ.ಮೀ. ಮಳೆ ಹೆಚ್ಚಾಗಿದೆ. ಕಳೆದ ಒಂದು ದಿನದ ಅವಧಿಯಲ್ಲಿ ಜಿಲ್ಲೆಯಲ್ಲಿ 36.92 ಮಿ.ಮೀ. ಮಳೆ ಸುರಿದಿದೆ. ತಾಲೂಕುವಾರು ಮಳೆಯ ಪ್ರಮಾಣವನ್ನು ಗಮನಿಸಿದರೆ ಮಡಿಕೇರಿಯಲ್ಲಿ 40.50 ಮಿ.ಮೀ. ಮಳೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ 755.22 ಮಿ.ಮೀ, ಮಳೆಯಾಗಿದೆ.

ವಿರಾಜಪೇಟೆ ತಾಲ್ಲೂಕಿನಲ್ಲಿ 46.57 ಮಿ.ಮೀ. ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿವರೆಗೆ 399.96 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 23.70 ಮಿ.ಮೀ. ಮಳೆಯಾಗಿದ್ದರೆ, ಜನವರಿಯಿಂದ ಇಲ್ಲಿಯವರೆಗಿನ ಮಳೆ 270.05 ಮಿ.ಮೀ. ಮಳೆ ಸುರಿದಿದೆ. ಹೋಬಳಿವಾರು ನೋಡವುದಾದರೆ, ದಕ್ಷಿಣ ಕೊಡಗಿನ ಹುದಿಕೇರಿಯಲ್ಲಿ 76.20 ಮಿ.ಮೀ ಅತಿಹೆಚ್ಚು ಮಳೆಯಾಗಿದ್ದರೆ, ಕುಶಾಲನಗರದಲ್ಲಿ ಕಡಿಮೆ 4 ಮಿ.ಮೀ. ಮಳೆಯಾಗಿದೆ. ಸುಂಟಿಕೊಪ್ಪ 12 ಮಿ.ಮೀ.ಮಳೆಯಾಗಿದೆ.

ಮಡಿಕೇರಿ ವ್ಯಾಪ್ತಿಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಗರಿಷ್ಠ 2,859 ಅಡಿಯ ಜಲಾಶಯದಲ್ಲಿ ಸದ್ಯ 2844.31 ಅಡಿ ನೀರಿದೆ. ಜಲಾಶಯ ಭರ್ತಿಯಾಗಲು 15 ಅಡಿಯಷ್ಟು ಬಾಕಿಯಿದೆ. ಒಳ ಹರಿವಿನ ಪ್ರಮಾಣ 1742 ಕ್ಯುಸೆಕ್ ಇದ್ದು, 30 ಕ್ಯುಸೆಕ್ ನೀರನ್ನು ನಾಲೆಗೆ ಬಿಡಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಭತ್ತದ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಕೆಲವು ಕಡೆಗಳಲ್ಲಿ ನಾಟಿ ಕೆಲಸವೂ ಆರಂಭವಾಗಲಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications