ಪ್ರವಾಹಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ
ಮಡಿಕೇರಿ, ಆಗಸ್ಟ್ 18: ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಗೆ ಇಂದು(ಆ.18) ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರಳಿ, ಪ್ರವಾಹ ಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.
ಕೊಡಗು ಜಿಲ್ಲೆಗೆ ಪ್ರವಾಸ ಬೆಳೆಸುವ ಮುನ್ನ 10:30 ಕ್ಕೆ ಅವರ ಗೃಹಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಆಗಸ್ಟ್ 19, ಭಾನುವಾರ ಪ್ರವಾಹ ಪೀಡಿತ ನಂಜನಗೂಡು ಮತ್ತು ಕಬಿನಿಗೆ ಅವರು ಭೇಟಿ ನೀಡಲಿದ್ದಾರೆ.
ಕರ್ನಾಟಕದ ಮೂವತ್ತು ಜಿಲ್ಲೆಗಳಲ್ಲಿ, ಒಟ್ಟು ಐದು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅತಿಯಾದ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಕುಮಾರಸ್ವಾಮಿ ಅವರು 200 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ.
ಪ್ರವಾಹದ ಹಿನ್ನೆಲೆಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ವಿವಿಧ ಸಂಘಟನೆಗಳ ಮೂಲಕ ದೇಣಿಗೆ ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಸಂತ್ರಸ್ತರಿಗೆ ಆಹಾರ, ಬಟ್ಟೆ, ಔಷಧಿ ಇತ್ಯಾದಿ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ಕೆಲವಾರು ಸಂಘಟನೆಗಳು, ಸ್ವಯಂಸೇವಕರು ಕಾರ್ಯನಿರತರಾಗಿದ್ದಾರೆ. ಸಂತ್ರಸ್ತರಿಗೆ ಧನ ಅಥವಾ ಬಟ್ಟೆ, ತಿಂಡಿ ಸೇರಿದಂತೆ ಯಾವುದೇ ರೀತಿಯ ನೆರವು ನೀಡುವಂ












Click it and Unblock the Notifications