ಕೊಡಗಿನಲ್ಲಿ ವರುಣನ ಆರ್ಭಟ: ತುಂಬಿ ಹರಿಯುತ್ತಿರುವ ನದಿ- ಕೊಳ್ಳಗಳು
ಮಡಿಕೇರಿ, ಜುಲೈ 14: ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಕಳೆದ 48 ಗಂಟೆಗಳಿಂದ ಮಳೆಯು ವೇಗವನ್ನು ಪಡೆದುಕೊಂಡಿದ್ದು, ಕೆರೆ, ಕೊಳ್ಳ, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು, ಮಡಿಕೇರಿ ನಗರದ ಮಂಗಳೂರು ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಗ್ರಾಮೀಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದು, ಒಂದೇ ದಿನ ನೀರಿನ ಮಟ್ಟ ಮೂರು ಅಡಿ ಏರಿಕೆಯಾಗಿದೆ.

ಹಾರಂಗಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2849.55 ಅಡಿಗಳಷ್ಟು ದಾಖಲಾಗಿದ್ದು, ಜಲಾಶಯ ಭರ್ತಿಯಾಗಲು 10 ಅಡಿಗಳಷ್ಟು ಬಾಕಿ ಇದೆ. ಜಲಾಶಯಕ್ಕೆ 7753 ಕ್ಯೂಸೆಕ್ಸ್ಗಳಷ್ಟು ನೀರು ಹರಿದು ಬರುತ್ತಿದೆ. ಹೊರಹರಿವು 405 ಕ್ಯೂಸೆಕ್ಸ್ಗಳಷ್ಟು ಇದೆ. ಇದೇ ರೀತಿ ಮಳೆಯಾದರೆ ಈ ವಾರಾಂತ್ಯದೊಳಗೆ ಜಲಾಶಯ ಭರ್ತಿ ಆಗಲಿದೆ.
ಪ್ರವಾಹದ ಸಾಧ್ಯತೆ ಇರುವ ಸ್ಥಳಗಳಿಗೆ ಮಂಗಳವಾರ ಮಡಿಕೇರಿ ಶಾಸಕ ಅಪ್ಪಚು ರಂಜನ್ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. "ಬಲುಮುರಿ ಗ್ರಾಮದ ಕಾವೇರಿ ನದಿಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಶಾಸಕ ಅಪ್ಪಚ್ಚು ರಂಜನ್ ನದಿ ಪಾತ್ರದ ಜನರ ಎಚ್ಚರಿಕೆಯಿಂದ ಇರುವಂತೆ,'' ಹೇಳಿದರು.
ಬಳಿಕ ಮಾತಾನಾಡಿದ ಅವರು, "ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾರೀ ಮಳೆ ಕಳೆದ 24 ಗಂಟೆಯಲ್ಲಿ 45.2 ಮಿ.ಮೀ ಮಳೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಎಡಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ಅಷ್ಟೇ ಅಲ್ಲದೇ ಇದೇ ರೀತಿ ಮಳೆ ಮುಂದುವರಿದರೆ ಕಾವೇರಿ ಉಕ್ಕಿ ಹರಿವ ಸಾಧ್ಯತೆಯು ಹೆಚ್ಚಾಗಿದೆ,'' ಎಂದರು.
ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿಯೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮಡಿಕೇರಿ ತಾಲೂಕಿನ ಬಲುಮುರಿಯ ಕಾವೇರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದೆ. ಬಲುಮುರಿ ಸೇತುವೆ ಮುಳುಗಡೆಯಾಗಲೂ ಕೇವಲ ಎರಡು ಅಡಿ ಮಾತ್ರ ಬಾಕಿಯಿದೆ. ಕಾಳಜಿ ಕೇಂದ್ರಗಳ ವ್ಯವಸ್ಥೆ ಅಹಾರ ಪೂರೈಕೆ ಬಗ್ಗೆ ಸಕಲ ರೀತಿಯಲ್ಲಿ ಸಿದ್ಧತೆಗಳು ನಡೆಸಿದೆ.
Recommended Video
ಕೊಡಗು ಜಿಲ್ಲೆಯಲ್ಲಿ ಎನ್ಡಿಆರ್ಎಫ್ ತಂಡ ಬೀಡು ಬಿಟ್ಟಿದ್ದು, ಭೂಕುಸಿತ ಮತ್ತು ಕಾವೇರಿ ನದಿಯ ಪ್ರವಾಹ ಸಂಭವಿಸಬಹುದಾದ ಸ್ಥಳಗಳ ನಿವಾಸಿಗಳಿಗೆ ಜಿಲ್ಲಾಡಳಿತವು ಎಚ್ಚರಿಕೆಯನ್ನು ನೀಡಿದ್ದು, ಪರಿಸ್ಥಿತಿಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications