ಕೊಡಗು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ
ಮಡಿಕೇರಿ, ನವೆಂಬರ್ 19: ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಅಸಿಂಧುಗೊಳಿಸಿ ರಾಜ್ಯ ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ಆದೇಶ ನೀಡಿದೆ.
ಇದರಿಂದಾಗಿ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ಇತ್ತೀಚಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತ್ತು ಆಯ್ಕೆ ಅಸಿಂಧುವಾಗಿದೆ.
ಪಕ್ಷದ್ರೋಹ ಆರೋಪ; ಮೂವರು ಜೆಡಿಎಸ್ ಸದಸ್ಯರ ಉಚ್ಚಾಟನೆ
ಈ ಮೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಸಮರ್ಪಕವಾಗಿ ನಡೆದಿಲ್ಲ ಎಂದು ಹಿರಿಯ ವಕೀಲರಾದ ಎ.ಎಸ್. ಪೊನ್ನಣ್ಣ ಹಾಗೂ ಎಂ.ಎಸ್. ಚಂದ್ರಮೌಳಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು ಎಂದು ಆದೇಶ ನೀಡಿದೆ.
Recommended Video
ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ತಕರಾರು ಸಲ್ಲಿಸಲು ಹತ್ತು ದಿನದ ಕಾಲಾವಕಾಶವನ್ನು ಕೂಡ ಕೋರ್ಟ್ ನೀಡಿದೆ. ಈ ಗಮನಾರ್ಹ ಆದೇಶದಿಂದಾಗಿ ಮೂರು ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕೈಗೆ ಬಂದ ಅಧಿಕಾರ ಇಲ್ಲದಂತಾಗಿದೆ. ಮೂರು ಪಂಚಾಯಿತಿಗಳಲ್ಲಿಯೂ ಬಿಜೆಪಿ ಅಧಿಕಾರವನ್ನು ತನ್ನದಾಗಿಸಿಕೊಂಡಿತ್ತು.