ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ನವೆಂಬರ್ 19: ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಅಸಿಂಧುಗೊಳಿಸಿ ರಾಜ್ಯ ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ಆದೇಶ ನೀಡಿದೆ.

ಇದರಿಂದಾಗಿ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ಇತ್ತೀಚಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತ್ತು ಆಯ್ಕೆ ಅಸಿಂಧುವಾಗಿದೆ.

ಪಕ್ಷದ್ರೋಹ ಆರೋಪ; ಮೂವರು ಜೆಡಿಎಸ್ ಸದಸ್ಯರ ಉಚ್ಚಾಟನೆಪಕ್ಷದ್ರೋಹ ಆರೋಪ; ಮೂವರು ಜೆಡಿಎಸ್ ಸದಸ್ಯರ ಉಚ್ಚಾಟನೆ

ಈ ಮೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಸಮರ್ಪಕವಾಗಿ ನಡೆದಿಲ್ಲ ಎಂದು ಹಿರಿಯ ವಕೀಲರಾದ ಎ.ಎಸ್. ಪೊನ್ನಣ್ಣ ಹಾಗೂ ಎಂ.ಎಸ್. ಚಂದ್ರಮೌಳಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು ಎಂದು ಆದೇಶ ನೀಡಿದೆ.

Kodagu: High Court Invalidate Kushalanagar Somawarapete Virajpete Local Body Election

Recommended Video

ಪೊಲೀಸ್ ಅಂದ್ರೆ ಹೀಗಿರಬೇಕು | Oneindia Kannada

ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ತಕರಾರು ಸಲ್ಲಿಸಲು ಹತ್ತು ದಿನದ ಕಾಲಾವಕಾಶವನ್ನು ಕೂಡ ಕೋರ್ಟ್ ನೀಡಿದೆ. ಈ ಗಮನಾರ್ಹ ಆದೇಶದಿಂದಾಗಿ ಮೂರು ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕೈಗೆ ಬಂದ ಅಧಿಕಾರ ಇಲ್ಲದಂತಾಗಿದೆ. ಮೂರು ಪಂಚಾಯಿತಿಗಳಲ್ಲಿಯೂ ಬಿಜೆಪಿ ಅಧಿಕಾರವನ್ನು ತನ್ನದಾಗಿಸಿಕೊಂಡಿತ್ತು.

English summary
The high court on Thursday ordered to invalidate the selection of the president and vice-president of local bodies in Kodagu district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X