ಮಡಿಕೇರಿಗೂ ಬರಲಿದೆ ಇಂದಿರಾ ಕ್ಯಾಂಟೀನ್!
ಮಡಿಕೇರಿ ಜನವರಿ 25: ಕೊನೆಗೂ ಕೊಡಗಿನ ಮುಖ್ಯಪಟ್ಟಣ ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಶೀಘ್ರವೇ ಆರಂಭವಾಗಲಿದ್ದು, ಈಗಾಗಲೇ ಸಿದ್ಧತಾ ಕಾರ್ಯಕ್ರಮಗಳು ಭರದಿಂದ ಸಾಗಿದೆ.
ಮಡಿಕೇರಿ ನಗರದ ನೂತನ ಖಾಸಗಿ ಬಸ್ ನಿಲ್ದಾಣ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣದ ಕಾಮಗಾರಿ ಭರದಿಂದ ಸಾಗುತ್ತಿವೆ. ಈಗಾಗಲೇ ಕಟ್ಟಡಕ್ಕೆ ಬೇಕಾದ ಎಲ್ಲ ಸಾಮಗ್ರಿಗಳು ಬಂದು ತಲುಪಿದ್ದು, ಈ ಪೈಕಿ ಎಲ್ಲವೂ ಸಿದ್ದ ವಸ್ತುಗಳಾಗಿದ್ದು, ಅದನ್ನು ಬಳಸಿಕೊಂಡು ಕಟ್ಟಡ ನಿರ್ಮಾಣ ಕಾರ್ಯ ಪ್ರಿಕಾಸ್ಟ್ ಕನ್ಸ್ಟ್ರಕ್ಷನ್ ತಂತ್ರಜ್ಞಾನ ಬಳಸಿ ನಡೆಯುತ್ತಿದೆ.
ಈಗಾಗಲೇ ಹೆಚ್ಚಿನ ಕಡೆಗಳಲ್ಲಿ ಕಟ್ಟಡಗನ್ನು ಇದೇ ಸಾಮಗ್ರಿ ಬಳಸಿ ನಿರ್ಮಿಸಲಾಗಿದ್ದು, ಇವು ಸುಮಾರು 60 ವರ್ಷ ಬಾಳಿಕೆ ಬರಲಿವೆ ಎನ್ನಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಫೆಬ್ರವರಿ ತಿಂಗಳೊಳಗೆ ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದ್ದು, ಅದರ ಸೌಲಭ್ಯ ಜನ ಪಡೆಯಲಿದ್ದಾರೆ.

ಕಟ್ಟಡ ನಿರ್ಮಾಣದ ಕುರಿತಂತೆ ಹೇಳುವುದಾದರೆ ಈಗಾಗಲೇ ಒಳಾಂಗಣ ಮತ್ತು ಹೊರಾಂಗಣದ ಕೆಲಸ ನಡೆದಿದ್ದು ಅಂತಿಮ ಕಾಮಗಾರಿ ನಡೆಯಬೇಕಾಗಿದೆ.
ಬೆಳಗಿನ ಉಪಾಹಾರದಲ್ಲಿ ಇಡ್ಲಿ ಸಾಂಬಾರ್, ರೈಸ್ ಬಾತ್, ಅವಲಕ್ಕಿ ಉಪ್ಪಿಟ್ಟು, ಖಾರಾ ಉಪ್ಪಿಟ್ಟು, ಇಡ್ಲಿ ಸಾಂಬಾರ್, ಚಿತ್ರಾನ್ನ, ಖಾರಾ ಪೊಂಗಲ್ ಮೊದಲಾದವು ಐದು ರೂಪಾಯಿಗೆ, ಅನ್ನ, ಸಾರು, ಉಪ್ಪಿನಕಾಯಿ, ಹಪ್ಪಳವಿರುವ ಮಧ್ಯಾಹ್ನದ ಊಟ, ಅನ್ನ ಸಾಂಬಾರು, ಉಪ್ಪಿನ ಕಾಯಿ, ಹಪ್ಪಳದ ರಾತ್ರಿಯ ಊಟ 10 ರೂ.ಗಳಿಗೆ ದೊರೆಯುವುದರಿಂದ ಇಲ್ಲಿನ ಜನಕ್ಕೆ ಅನುಕೂಲವಾಗುವುದು ಖಚಿತ.

ಒಟ್ಟಾರೆ ಸರ್ಕಾರದ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಮಡಿಕೇರಿಗೂ ಬರುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಒಂದಷ್ಟು ಉಪಯೋಗವಾಗುವುದರಲ್ಲಿ ಎರಡು ಮಾತಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications