ಮಡಿಕೇರಿಗೂ ಬರಲಿದೆ ಇಂದಿರಾ ಕ್ಯಾಂಟೀನ್!
ಮಡಿಕೇರಿ ಜನವರಿ 25: ಕೊನೆಗೂ ಕೊಡಗಿನ ಮುಖ್ಯಪಟ್ಟಣ ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಶೀಘ್ರವೇ ಆರಂಭವಾಗಲಿದ್ದು, ಈಗಾಗಲೇ ಸಿದ್ಧತಾ ಕಾರ್ಯಕ್ರಮಗಳು ಭರದಿಂದ ಸಾಗಿದೆ.
ಮಡಿಕೇರಿ ನಗರದ ನೂತನ ಖಾಸಗಿ ಬಸ್ ನಿಲ್ದಾಣ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣದ ಕಾಮಗಾರಿ ಭರದಿಂದ ಸಾಗುತ್ತಿವೆ. ಈಗಾಗಲೇ ಕಟ್ಟಡಕ್ಕೆ ಬೇಕಾದ ಎಲ್ಲ ಸಾಮಗ್ರಿಗಳು ಬಂದು ತಲುಪಿದ್ದು, ಈ ಪೈಕಿ ಎಲ್ಲವೂ ಸಿದ್ದ ವಸ್ತುಗಳಾಗಿದ್ದು, ಅದನ್ನು ಬಳಸಿಕೊಂಡು ಕಟ್ಟಡ ನಿರ್ಮಾಣ ಕಾರ್ಯ ಪ್ರಿಕಾಸ್ಟ್ ಕನ್ಸ್ಟ್ರಕ್ಷನ್ ತಂತ್ರಜ್ಞಾನ ಬಳಸಿ ನಡೆಯುತ್ತಿದೆ.
ಈಗಾಗಲೇ ಹೆಚ್ಚಿನ ಕಡೆಗಳಲ್ಲಿ ಕಟ್ಟಡಗನ್ನು ಇದೇ ಸಾಮಗ್ರಿ ಬಳಸಿ ನಿರ್ಮಿಸಲಾಗಿದ್ದು, ಇವು ಸುಮಾರು 60 ವರ್ಷ ಬಾಳಿಕೆ ಬರಲಿವೆ ಎನ್ನಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಫೆಬ್ರವರಿ ತಿಂಗಳೊಳಗೆ ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದ್ದು, ಅದರ ಸೌಲಭ್ಯ ಜನ ಪಡೆಯಲಿದ್ದಾರೆ.

ಕಟ್ಟಡ ನಿರ್ಮಾಣದ ಕುರಿತಂತೆ ಹೇಳುವುದಾದರೆ ಈಗಾಗಲೇ ಒಳಾಂಗಣ ಮತ್ತು ಹೊರಾಂಗಣದ ಕೆಲಸ ನಡೆದಿದ್ದು ಅಂತಿಮ ಕಾಮಗಾರಿ ನಡೆಯಬೇಕಾಗಿದೆ.
ಬೆಳಗಿನ ಉಪಾಹಾರದಲ್ಲಿ ಇಡ್ಲಿ ಸಾಂಬಾರ್, ರೈಸ್ ಬಾತ್, ಅವಲಕ್ಕಿ ಉಪ್ಪಿಟ್ಟು, ಖಾರಾ ಉಪ್ಪಿಟ್ಟು, ಇಡ್ಲಿ ಸಾಂಬಾರ್, ಚಿತ್ರಾನ್ನ, ಖಾರಾ ಪೊಂಗಲ್ ಮೊದಲಾದವು ಐದು ರೂಪಾಯಿಗೆ, ಅನ್ನ, ಸಾರು, ಉಪ್ಪಿನಕಾಯಿ, ಹಪ್ಪಳವಿರುವ ಮಧ್ಯಾಹ್ನದ ಊಟ, ಅನ್ನ ಸಾಂಬಾರು, ಉಪ್ಪಿನ ಕಾಯಿ, ಹಪ್ಪಳದ ರಾತ್ರಿಯ ಊಟ 10 ರೂ.ಗಳಿಗೆ ದೊರೆಯುವುದರಿಂದ ಇಲ್ಲಿನ ಜನಕ್ಕೆ ಅನುಕೂಲವಾಗುವುದು ಖಚಿತ.

ಒಟ್ಟಾರೆ ಸರ್ಕಾರದ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಮಡಿಕೇರಿಗೂ ಬರುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಒಂದಷ್ಟು ಉಪಯೋಗವಾಗುವುದರಲ್ಲಿ ಎರಡು ಮಾತಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications