ಕೊಡಗಿನಲ್ಲಿ ಕೊಂಗಾಳ್ವರ ಕಾಲದ ವೀರಗಲ್ಲು ಶಾಸನಗಳು ಪತ್ತೆ
ಮಡಿಕೇರಿ, ಜೂನ್ 12: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕೊಂಗಾಳ್ವರ ಕಾಲದ ಮೂರು ವೀರಗಲ್ಲು ಶಾಸನಗಳು ಪತ್ತೆಯಾಗಿವೆ. ಬಳಗುಂದ ಗ್ರಾಮದ ಕೆ.ಆರ್.ಪೂವಯ್ಯ ಎಂಬುವರ ಕಾಫಿ ತೋಟದಲ್ಲಿ ಶಾಸನವೊಂದು ಕಂಡುಬಂದಿದೆ.
Recommended Video
ಈ ವೀರಗಲ್ಲು ಶಾಸನ ಕ್ರಿ.ಶ.11-12ನೇ ಶತಮಾನಕ್ಕೆ ಸೇರಿದ್ದಾಗಿದೆ. ಈ ಪ್ರಕಾರ ವೀರದುದ್ದ ಎಂಬಾತ ಕೊಂಗಾಳ್ವ ದೊರೆಯಾಗಿದ್ದು, ಈತನಿಗೂ ಹೊಯ್ಸಳ ದೊರೆ ಒಂದನೆಯ ನರಸಿಂಹನಿಗೂ ಮೊಳತೆ ಎಂಬಲ್ಲಿ ಹೋರಾಟ ನಡೆದಿತ್ತು. ಆ ಹೋರಾಟದಲ್ಲಿ ಮೃತಪಟ್ಟ ವೀರ ಬಂಮಗೌಡನಿಗಾಗಿ ಹಾಕಿಸಿದ ವೀರಗಲ್ಲು ಶಾಸನ ಇದಾಗಿದೆ ಎಂದು ತಿಳಿದು ಬಂದಿದೆ.

ಇದೇ ತಾಲೂಕಿನ ನಗರೂರು ಗ್ರಾಮದ ನಿವಾಸಿ ತಾರಾ ಅವರ ತೋಟದಲ್ಲಿ ದೊರೆತ ವೀರಗಲ್ಲು 9 ಸಾಲುಗಳ ಶಾಸನವಾಗಿದ್ದು, ಕೊಂಗಾಳ್ವ ದೊರೆ ಮನಿಜನ ತರುವಾಯ ಬಂದ ದೊರೆ ಬಡಿವ ಅಥವಾ ಕಾಡವ ಈತನ ಆಳ್ವಿಕೆಗೆ ಸೇರಿದ ವೀರಗಲ್ಲು ಇದು ಎಂಬ ಮಾಹಿತಿ ಲಭ್ಯವಾಗಿದೆ. ಇದರ ಜತೆಗೆ ಮಹಾಲಿಂಗೇಶ್ವರ ದೇವಾಲಯದ ಸಮೀಪವೊಂದು ವೀರಗಲ್ಲು ದೊರೆತಿದ್ದು, ಅದರಲ್ಲಿನ ಶಾಸನ ಸವೆದು ಹೋಗಿರುವುದರಿಂದ ಹೆಚ್ಚಿನ ವಿವರಗಳು ತಿಳಿಯದಾಗಿದೆ. ಆದರೆ ಕೊನೆಯ ಪಟ್ಟಿಕೆಯಲ್ಲಿನ ಅಕ್ಷರಗಳನ್ನು ಆಧರಿಸಿ ಇದು ಕ್ರಿ.ಶ.12ನೇ ಶತಮಾನಕ್ಕೆ ಸೇರಿದ್ದಾಗಿದೆ ಎಂದು ಹೇಳಬಹುದಾಗಿದೆ.

ಈ ಮೂರು ಶಾಸನಗಳ ಪತ್ತೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಕೇಶವ ಹಾಗೂ ಸ್ಥಳೀಯರು ಸಹಕರಿಸಿದ್ದಾರೆ. ಶಾಸನವನ್ನು ಡಾ. ಎಚ್.ಎಂ.ನಾಗರಾಜ್ ರಾವ್ ಅವರು ಓದಿಕೊಟ್ಟಿರುವುದಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ.ರೇಖಾ ಅವರು ತಿಳಿಸಿದ್ದಾರೆ. ಒಟ್ಟಾರೆ ಸೋಮವಾರ ಪೇಟೆಯಲ್ಲಿ ದೊರೆತ ಈ ಶಾಸನಗಳು ಇತಿಹಾಸದ ಕಥೆ ಹೇಳುವುದರೊಂದಿಗೆ ಕೊಡಗಿನಲ್ಲಿ ಕೊಂಗಾಳ್ವರು ಆಡಳಿತ ನಡೆಸಿದ್ದರು ಎಂಬುದು ಇವತ್ತಿನ ಜನತೆಗೆ ಗೊತ್ತಾಗುವಂತೆ ಮಾಡಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications