Election flashback: 'ದೈತ್ಯ ಸಂಹಾರಿ' ಜನತಾ ಪರಿವಾರದ ಜೀವಿಜಯ
1983ರಲ್ಲಿ ಹಾಲಿ ಮುಖ್ಯಮಂತ್ರಿಗಳನ್ನು ಸೋಲಿಸಿದ ಅಭ್ಯರ್ಥಿ 'ದೈತ್ಯ ಸಂಹಾರಿ' ಬಿ.ಎ ಜೀವಿಜಯ ಅವರು ಈ ಬಾರಿ ಮಡಿಕೇರಿ ಕ್ಷೇತ್ರದಿಂದ ಜಾತ್ಯಾತೀತ ಜನತಾದಳ ಟಿಕೆಟ್ ಪಡೆದು ಸ್ಪರ್ಧೆಗಿಳಿಯುತ್ತಿದ್ದಾರೆ.
ಅಂದಿನ ಸಿಎಂ ಆರ್. ಗುಂಡೂರಾವ್ ಮತ್ತು ಬಿ.ಎ. ಜೀವಿಜಯ ನಡುವಿನ ರಾಜಕೀಯ ಕದನ ಆ ಕಾಲಕ್ಕೆ ರೋಚಕವಾಗಿತ್ತು. ಅಂದಿನ ಕಾಲದಲ್ಲಿ ಎಲ್ಲೆಡೆ ಕಾಂಗ್ರೆಸ್ ತನ್ನ ಪ್ರಭುತ್ವ ಹೊಂದಿತ್ತು. ಜನತಾ ಪರಿವಾರದಿಂದ ಸ್ಪರ್ಧಿಸಿದ್ದ ಜೀವಿಜಯ ಅವರು ಅವರಿಗೆ ಗೆಲುವು ತಂದು ಕೊಟ್ಟಿದ್ದು ರೈತ ಸಮೂಹ.
1972 ಹಾಗೂ 78ರಲ್ಲಿ ಸತತವಾಗಿ ಗೆಲುವು ದಾಖಲಿಸಿದ್ದ ಕುಶಾಲನಗರ ಮೂಲದ ಗುಂಡೂರಾಯರು ಕೂಡಾ ಪ್ರಭಾವಿ ನಾಯಕರಾಗಿ, ಸಿಎಂ ಆಗಿ ಬೆಳೆದಿದ್ದು ಕೂಡಾ ಕುತೂಹಲಕಾರಿ. ಡಿ. ದೇವರಾಜ ಅರಸು ಅವರನ್ನು ಹಿಂದಿಕ್ಕಿ ಸಿಎಂ ಸ್ಥಾನಕ್ಕೇರಿದ್ದ ಗುಂಡೂರಾಯರಿಗೆ 1983ರಲ್ಲಿ ಸೋಲಿನ ಕಹಿಯುಣಿಸಿದ್ದು ಜೀವಿಜಯ.

ರೈತರ ಮೇಲಿನ ದೌರ್ಜನ್ಯ, ಆಂತರಿಕ ಭಿನ್ನಮತ ಹೀಗೆ ಕೆಲ ಕಾರಣಗಳು ಗುಂಡೂರಾಯರ ವಿರುದ್ಧವಾಗಿ ನಿಂತು, ಜೀವಿಜಯ ಅವರ ಕೈಗೆ ಗೆಲುವಿನ ಕಾಣಿಕೆ ನೀಡಿತ್ತು.
1983ರ ಚುನಾವಣೆ ಫಲಿತಾಂಶ:
* ಜನತಾ ಪರಿವಾರದ ಬಿ.ಎ ಜೀವಿಜಯ -31,544 ಮತಗಳು (52.66% ಮತ ಪಾಲು)
* ಕಾಂಗ್ರೆಸ್ಸಿನ ಗುಂಡೂರಾವ್ -26,162 ಮತಗಳು (43.67% ಮತ ಪಾಲು)
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಈ ಹಿಂದೆ ಇದ್ದ ಸೋಮವಾರ ಪೇಟೆ 2008ರ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ರದ್ದಾಯಿತು. ಇಲ್ಲಿಂದಲೇ ಗೆದ್ದು ಆರ್. ಗುಂಡೂರಾವ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಆದರೆ ಆ ಕ್ಷೇತ್ರವೇ ಇವತ್ತು ನೆನಪು ಮಾತ್ರ.
1983ರಲ್ಲಿ ಗೆಲುವು ಸಾಧಿಸಿದ ಬಳಿಕ ಸತತ 9 ಬಾರಿ ಸ್ಪರ್ಧಿಸಿರುವ ಜೀವಿಜಯ ಅವರು ಈಗ 10ನೇ ಬಾರಿಗೆ ಕಣಕ್ಕಿಳಿದಿದ್ದಾರೆ. 1983, 85, 2004ರಲ್ಲಿ ಗೆಲುವು ಸಾಧಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications