ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗಿನ ಸಾಧಕರು: ಇಲ್ಲಿದೆ ವಿವರ
ಮಡಿಕೇರಿ, ಡಿಸೆಂಬರ್ 13: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2024ರ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.
ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, 'ಸಾಹಿತ್ಯದಲ್ಲಿ ರಾಜಕೀಯ - ರಾಜಕೀಯದಲ್ಲಿ ಸಾಹಿತ್ಯ' ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ.

ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕೈಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನ ವಾಚನ ಮಾಡಲಿದ್ದಾರೆ. ಮಹಿಳಾ ಕವಿಗಳ ಕವಿಗೋಷ್ಠಿ ನಡೆಯಲಿದೆ. 87ನೇ ಸಾಹಿತ್ಯ ಸಮ್ಮೇಳನವಾದ್ದರಿಂದ 87 ಸಾಧಕರನ್ನು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಕುರಿತು 50 ಸಾಧಕರನ್ನು ಒಟ್ಟಾಗಿ 137 ಸಾಧಕರನ್ನು ಸನ್ಮಾನಿಸಲಾಗುತ್ತಿದೆ.
ಕೊಡಗು ಜಿಲ್ಲೆಯಿಂದ ವಿಶೇಷ ಆಹ್ವಾನಿತರು, ನೊಂದಾಯಿತ ಪ್ರತಿನಿಧಿಗಳು, ಸಾಹಿತ್ಯ ಪರಿಷತ್ತಿನ ಸದಸ್ಯರು, ಕನ್ನಡ ಅಭಿಮಾನಿಗಳು ಸೇರಿದಂತೆ 300 ಕ್ಕೂ ಹೆಚ್ಚು ಮಂದಿ ಸಮ್ಮೇಳನಕ್ಕೆ ಹೋಗುವ ತಯಾರಿ ನಡೆಸಿದ್ದಾರೆ. ಶತಮಾನ ರಜತ ಸುವರ್ಣ ಸಂಭ್ರಮ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನಡೆಯಲಿದ್ದು ಭಾರತದ ಸಂವಿಧಾನ 75 ಕುರಿತು ಕೊಡಗಿನ ಹಿರಿಯ ಸಾಹಿತಿಗಳಾದ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಉಪನ್ಯಾಸ ನೀಡಲಿದ್ದಾರೆ.
ಪ್ರತಿ ಜಿಲ್ಲೆಯಿಂದ ಓರ್ವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು ಕೊಡಗು ಜಿಲ್ಲೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಕಾಶವಾಣಿ ಉದ್ಘೋಷಕರು, ಯಕ್ಷಗಾನ ತಾಳ ಮದ್ದಳೆ ಪ್ರವೀಣರು, ಸಾಹಿತಿ ಸುಬ್ರಾಯ ಸಂಪಾಜೆ ಇವರನ್ನು ಸನ್ಮಾನಿಸಲಾಗುತ್ತಿದೆ.

ಕೊಡಗು ಜಿಲ್ಲೆಯಿಂದ ಕವಿಗೋಷ್ಠಿಗೆ ಕವಿಯತ್ರಿ, ಸಾಹಿತಿ ಶ್ರೀಮತಿ ರಮ್ಯ ಕೆ.ಜಿ ರವರನ್ನು ಆಯ್ಕೆ ಮಾಡಲಾಗಿದೆ. ಇದು ಕನ್ನಡಿಗರ ಹಬ್ಬ ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೊಡಗಿನ ಕನ್ನಡ ಅಭಿಮಾನಿಗಳು ಭೇಟಿ ಕೊಡಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಎಂ.ಪಿ ಕೇಶವ ಕಾಮತ್ ಮನವಿ ಮಾಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications