ಸದಾನಂದ ಗೌಡರು ಕಿವಿಹಿಂಡಿದ ಮೇಲೆ ಕೊಡಗು ಬಿಜೆಪಿಯಲ್ಲಿ ಒಗ್ಗಟ್ಟಿನ ಬಲ!
ಮಡಿಕೇರಿ, ಸೆಪ್ಟೆಂಬರ್ 12: ಕೊಡಗಿನ ಬಿಜೆಪಿಯಲ್ಲಿದ್ದ ಆಂತರಿಕ ಬಿಕ್ಕಟ್ಟನ್ನೆಲ್ಲ ತಮ್ಮೊಳಗೇ ಶಮನಗೊಳಿಸಿಕೊಂಡು ಒಗ್ಗಟ್ಟಿನ ಮಂತ್ರವನ್ನು ಜಪಿಸಲು ಎಲ್ಲ ನಾಯಕರು ಮುಂದಾಗಿದ್ದಾರೆ.
ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಬಿಜೆಪಿ ಆಧಿಪತ್ಯ ಸಾಧಿಸಿದೆ. ಮಂದೆಯೂ ಅದನ್ನೇ ಮುಂದುವರೆಸಿಕೊಂಡು ಹೋಗಬೇಕಾದರೆ ಒಗ್ಗಟ್ಟಿನ ಮಂತ್ರ ಅನಿವಾರ್ಯವಾಗಿದೆ. ಈಗಾಗಲೇ ಬಿಜೆಪಿಯ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಕ್ಕೊರಲಿನಿಂದ ಎರಡು ಕ್ಷೇತ್ರಗಳಲ್ಲೂ ಹಾಲಿ ಶಾಸಕರನ್ನೇ ಮುಂದಿನ ವಿಧಾನಸಭಾ ಚುನಾವಣೆಗೂ ಅಭ್ಯರ್ಥಿಗಳನ್ನಾಗಿಸಲು ಒಪ್ಪಿಗೆ ನೀಡಿದ್ದಾರೆ.
ಈ ನಡುವೆ ಕಾಂಗ್ರೆಸ್ ಕೂಡ ತನ್ನಲ್ಲಿದ್ದ ಗೊಂದಲಗಳನ್ನು ಬದಿಗೆ ಸರಿಸಿಕೊಂಡು ಚುನಾವಣೆಗೆ ಸಜ್ಜಾಗುತ್ತಿದೆಯಾದರೂ ಟಿ.ಪಿ.ರಮೇಶ್ ಅವರಿಂದಾದ ಮುಜುಗರವನ್ನು ಸಹಿಸಿಕೊಂಡು ಮುನ್ನಡೆಯುವುದು ಕಷ್ಟವಾಗಿದೆ. ಜತೆಜತೆಯಲ್ಲೇ ಅಲ್ಲೂ ಟಿಕೇಟ್ ಗಾಗಿ ನಾಯಕರು ಮುಗಿಬೀಳುವ ಸಾಧ್ಯತೆ ಹೆಚ್ಚಿದೆ. ಎಲ್ಲರನ್ನು ಸಂಭಾಳಿಸಿ ಒಬ್ಬರನ್ನು ಆಯ್ಕೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಒಂದು ವೇಳೆ ಆಯ್ಕೆ ಮಾಡಿದರೂ ಅವರನ್ನು ಒಪ್ಪಿಕೊಂಡು ಕೆಲಸ ಮಾಡಲು ನಾಯಕರು ಮತ್ತು ಕಾರ್ಯಕರ್ತರು ಮುಂದಾಗಬೇಕಾಗುತ್ತದೆ. ಅದಕ್ಕೊಂದಿಷ್ಟು ಒಂದಷ್ಟು ಸಮಯವೂ ಬೇಕಾಗುತ್ತದೆ.
ಆದರೆ ಬಿಜೆಪಿ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿರುವುದರಿಂದ ಮುಂದಿನ ಚುನಾವಣೆಗೆ ಮತದಾರರ ಮುಂದೆ ಹೋಗುವುದು ಕಷ್ಟವಾಗಲಾರದು. ಅದಕ್ಕೆಂದೇ ಈಗಾಗಲೇ ಬಿಜೆಪಿಯಲ್ಲಿದ್ದ ಎಲ್ಲ ಗೊಂದಲಗಳನ್ನು ಬದಿಗೊತ್ತುವ ಪ್ರಯತ್ನ ಮಾಡಲಾಗುತ್ತಿದೆ.

ಫಲ ನೀಡಿತು ರಹಸ್ಯ ಸಭೆ!
ಕಳೆದ ಆರು ತಿಂಗಳಿನಿಂದ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಬಿ.ಬಿ. ಭಾರತೀಶ್ ಆಯ್ಕೆ ಬಳಿಕ ಪಕ್ಷದೊಳಗೆ ಒಂದಷ್ಟು ಅಸಮಾಧಾನಗಳು ಹೊಗೆಯಾಡುತ್ತಿದ್ದವು. ಹೀಗಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ಸಮ್ಮುಖ ಎಲ್ಲ ನಾಯಕರನ್ನು ಒಂದೆಡೆ ಸೇರಿಸಿ ರಹಸ್ಯ ಸಮಾಲೋಚನಾ ಸಭೆಯನ್ನು ಇತ್ತೀಚೆಗೆ ನಡೆಸಲಾಗಿದೆ.

ಭಿನ್ನಾಭಿಪ್ರಾಯವಿಲ್ಲ
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಹಾಗೂ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಸೇರಿದಂತೆ ಹಲವರು ಪಾಲ್ಗೊಂಡು ಇದುವರೆಗೆ ಇದ್ದ ಎಲ್ಲ ಗೊಂದಲಗಳನ್ನು ಬದಿಗೊತ್ತಿ, ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಒಗ್ಗಟ್ಟು ಅವಶ್ಯವಾಗಿದೆ. ಆದ್ದರಿಂದ ತಮ್ಮೊಳಗಿನ ಎಲ್ಲ ಭಿನ್ನಾಭಿಪ್ರಾಯ ಮರೆತು ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ವಿಸ್ತಾರಕ್ ಪ್ರಭಾವ
ಈಗಾಗಲೇ ಬಿಜೆಪಿ ವಿಸ್ತಾರಕ್ ಯೋಜನೆಯಿಂದ ಲಭಿಸಿರುವ ಲಾಭ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನತೆಗೆ ತಲುಪಿಸುವಲ್ಲಿ ಕಾರ್ಯತರ್ಕರ ಮನೋಭೂಮಿಕೆ ಬಗ್ಗೆ ಗಂಭೀರ ಚರ್ಚಿಸಲಾಗಿದ್ದು, ಅದನ್ನೇ ಮುಂದಿಟ್ಟುಕೊಂಡು ಜನರ ಮುಂದೆ ತೆರಳಿ ಮತ ಕೇಳುವಂತೆ ಸದಾನಂದಗೌಡ ಹೇಳಿದ್ದಾರೆ ಎನ್ನಲಾಗಿದೆ.

ಎರಡು ಸ್ಥಾನ ಉಳಿಸಿಕೊಲ್ಳುವ ಯತ್ನ
ಒಟ್ಟಾರೆ ಚುನಾವಣೆ ಬರುತ್ತಿದ್ದಂತೆ ಕೊಡಗಿನ ಬಿಜೆಪಿ ತನ್ನೆಲ್ಲ ಗೊಂದಲಗಳನ್ನು ಕೊಡವಿಕೊಂಡು ಮೇಲೆದ್ದು ನಿಂತಿದೆ. ಅಷ್ಟೇ ಅಲ್ಲ ತನ್ನೆರಡು ಸ್ಥಾನಗಳನ್ನು ಉಳಿಸಿಕೊಳ್ಳಲು ಬೇಕಾದ ತಂತ್ರಗಳನ್ನು ಮಾಡಲು ಈಗಿನಿಂದಲೇ ಮುಂದಾಗಿರುವುದು ಗೋಚರಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications