ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಮಳೆ ಸಂತ್ರಸ್ತರಿಗೆ ಹಾಸನ ಹಾಲು ಒಕ್ಕೂಟದ 30 ಸಾವಿರ ಲೀ. ಹಾಲು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಆಗಸ್ಟ್ 19: ಹಾಸನ ಹಾಲು ಒಕ್ಕೂಟದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಬಿಸ್ಕತ್, 200 ಕ್ವಿಂಟಲ್ ಅಕ್ಕಿ ಮತ್ತು ತೊಗರಿ ಬೇಳೆ, ಒಂದು ಸಾವಿರ ಬಾಕ್ಸ್ ಕುಡಿಯುವ ನೀರನ್ನು ನಿರಾಶ್ರಿತರಿಗೆ ಪೂರೈಸಲಾಗಿದೆ. ಅಡುಗೆ ಎಣ್ಣೆ ಮತ್ತು ಬಟ್ಟೆ ಪೂರೈಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಅತಿವೃಷ್ಟಿಯಿಂದ ನಿರಾಶ್ರಿತರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಾಶ್ರಿತರಿಗೆ ಸರಕಾರ ನೆರವು ನೀಡಲಿದೆ. ಅತಿವೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಕುಸಿದಿವೆ. ಮಳೆ ನಿಂತ ನಂತರ ಈ ರಸ್ತೆಗಳ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೊಡಗು ಪ್ರವಾಹ ಸಂತ್ರಸ್ತರಿಗಾಗಿ ಅತ್ಯಗತ್ಯ ಸಹಾಯವಾಣಿಕೊಡಗು ಪ್ರವಾಹ ಸಂತ್ರಸ್ತರಿಗಾಗಿ ಅತ್ಯಗತ್ಯ ಸಹಾಯವಾಣಿ

ಲೋಕೋಪಯೋಗಿ ಇಲಾಖೆ ರಸ್ತೆಗೆ ಸಂಬಂಧಿಸಿದಂತೆ 150 ಕೋಟಿ ರುಪಾಯಿನಷ್ಟು ನಷ್ಟ ಉಂಟಾಗಿದೆ. ಅತಿವೃಷ್ಟಿಯಿಂದ ಸುಮಾರು 500 ಕೋಟಿ ರುಪಾಯಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮಡಿಕೇರಿ-ಮಂಗಳೂರು ರಸ್ತೆ ಕಾಮಗಾರಿಯನ್ನು ಮಳೆ ನಿಂತ ನಂತರವೇ ಆರಂಭಿಸಲು ಸಾಧ್ಯ. ಸದ್ಯಕ್ಕೆ ಲಘು ವಾಹನಗಳ ಓಡಾಟಕ್ಕೆ ಎಲ್ಲಾ ರೀತಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

Kodagu calamity: 30 thousand litre milk contributed by Hassan milk federation

ಸದ್ಯ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಎರಡು ಉಪ ವಿಭಾಗಗಳ ಕಚೇರಿ, ಮಡಿಕೇರಿಯಲ್ಲಿ ಒಂದು ವಿಶೇಷ ವಿಭಾಗದ ಕಚೇರಿ ತೆರೆಯಲಾಗಿದೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ.

English summary
Kodagu flood situation: Hassan milk federation contributed 30 thousand litre milk, 5,000 biscuit, 200 kg rice and other things to rain hit area people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X