ಕೊಡಗು: ಬಾಗಿಲು ಮುಚ್ಚಿ ಪ್ರವಚನ ನೀಡುತ್ತಿದ್ದ ಮಸೀದಿ ವಿರುದ್ಧ ಕೇಸ್ ದಾಖಲು
ಮಡಿಕೇರಿ, ಏಪ್ರಿಲ್ 28: ಕೊರೊನಾ ಎರಡನೇ ಅಲೆ ತಡೆಗಟ್ಟಲು ಸರ್ಕಾರ ವಿವಿಧ ರೀತಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಹಗಲು-ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ.
ಆದರೆ, ಕೊಡಗು ಜಿಲ್ಲೆ ವಿರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಪೆರುಂಬಾಡಿಯ ಅನ್ವರುಲ್ ಹುದಾ ವಿದ್ಯಾ ಸಂಸ್ಥೆ ಹಾಗೂ ಮಸೀದಿಯ ಆಡಳಿತ ಮಂಡಳಿ ಲಾಕ್ಡೌನ್ ನಿಯಮ ಉಲ್ಲಂಘಿಸಿದೆ.
ಮಸೀದಿಯ ಒಳಾಂಗಣದಲ್ಲಿ ಸುಮಾರು 80 ಮಂದಿಗೆ ಪ್ರವಚನ ಬೋಧಿಸುವ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ತಾಲೂಕು ತಹಶೀಲ್ದಾರ ಮಂಗಳವಾರ ಮಧ್ಯಾಹ್ನ ದಿಢೀರ್ ದಾಳಿ ನಡೆಸಿ, ಮಸೀದಿಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಮಸೀದಿಯ ಹೊರಭಾಗದಲ್ಲಿ ಕೋವಿಡ್-19 ನಿಯಮ ಪಾಲಿಸಲು ಮಸೀದಿಯನ್ನು ಮುಚ್ಚಲಾಗಿದೆ ಎಂಬ ನಾಮಫಲಕ ಅಳವಡಿಸಿ, ಒಳಗೆ ಪ್ರವಚನ ನಡೆಸುತ್ತಿದ್ದರು. ಇಲ್ಲಿನ ವಿದ್ಯಾರ್ಥಿಗಳೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡದೆ ಪ್ರವಚನದಲ್ಲಿ ಭಾಗವಹಿಸಿರುವುದು ತಹಶೀಲ್ದಾರ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಅನಾಥ ಮಕ್ಕಳು ಇರುವುದರಿಂದ ಇವರನ್ನು ಎಲ್ಲಿಯೂ ಕಳುಹಿಸಲು ಸಾಧ್ಯವಾಗಲಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.

ಅನ್ವರಲ್ ಹುದಾ ವಿದ್ಯಾಸಂಸ್ಥೆ ಹಾಗೂ ಮಸೀದಿಯಲ್ಲಿ 50 ರಿಂದ 60 ಮಂದಿ ವಯಸ್ಕರು, 15 ರಿಂದ 20 ವಿದ್ಯಾರ್ಥಿಗಳು ಪ್ರವಚನದಲ್ಲಿ ಭಾಗವಹಿಸಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಐಪಿಸಿ ಸೆಕ್ಷನ್ 269 ಕಲಂ 51 ಬಿ. ಇದರಡಿಯಲ್ಲಿ (ವಿಪತ್ತು ನಿರ್ವಹಣಾ ಕಾಯ್ದೆ) ಆಡಳಿತದ ಮಂಡಳಿಯ ಅಬ್ದುಲ್ ರಶೀದ್, ಅಶ್ರಫ್ ಹಾಗೂ ಸೆಫ್ಫಿಯಾನ್ ಎಂಬುವರ ಮೇಲೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications