ಕೊಡಗು: "7 ಸಾವಿರ ಆದಿವಾಸಿ ಕುಟುಂಬಗಳಿಗೆ ಕೋವಿಡ್ ಲಸಿಕೆ ಹಾಕಿಸುವ ಗುರಿ''
ಮಡಿಕೇರಿ, ಜೂನ್ 12: ಕೊವೀಡ್- 19ರ ಮೂರನೇ ಅಲೆ ಬರದಂತೆ ನೋಡಿಕೊಳ್ಳುವಲ್ಲಿ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬೇಕು. ಆ ದಿಸೆಯಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಶಾಸಕರಾದ ಕೆ.ಜಿ.ಬೋಪಯ್ಯ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಮಾಲ್ದಾರೆ ಬಳಿಯ ಚೆನ್ನಂಗಿ ಬಸವನಹಳ್ಳಿ ಆಶ್ರಮ ಶಾಲೆಯಲ್ಲಿ ಆದಿವಾಸಿ ಜನರಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ""ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಇರುವುದಿಲ್ಲ. ಆದ್ದರಿಂದ ತಪ್ಪು ಕಲ್ಪನೆಯಿಂದ ಆದಿವಾಸಿ ಜನರು ಹೊರಬರಬೇಕು. ಚೆನ್ನಂಗಿ ಬಸವನಹಳ್ಳಿ ವ್ಯಾಪ್ತಿಯಲ್ಲಿ 255ಕ್ಕೂ ಹೆಚ್ಚು ಜನರು ಲಸಿಕೆ ಪಡೆಯಲು ಮುಂದೆ ಬಂದಿರುವುದು ಉತ್ತಮ ಬೆಳವಣಿಗೆ, ಆ ದಿಸೆಯಲ್ಲಿ ವಿರಾಜಪೇಟೆ ತಾಲ್ಲೂಕಿನ ಎಲ್ಲಾ ಹಾಡಿಗಳಲ್ಲಿ ಕೊರೊನಾ ಮುಕ್ತ ಮಾಡಬೇಕು'' ಎಂದು ಕೆ.ಜಿ.ಬೋಪಯ್ಯ ಕೋರಿದರು.
ಕೋವಿಡ್-19 ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು. ಜ್ವರ, ಕೆಮ್ಮು, ನೆಗಡಿ, ಮೈ-ಕೈ ನೋವು ಹೀಗೆ ಹಲವು ರೀತಿಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ ತೆರಳಿ ವೈದ್ಯರನ್ನು ಭೇಟಿ ಮಾಡಬೇಕು ಎಂದರು.

ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಮಾತನಾಡಿ, ""ಹಿಂದೆ ಆದಿವಾಸಿಗಳು ಸ್ಥಳೀಯವಾಗಿ ದೊರೆಯುವ ಗೆಡ್ಡೆಗೆಣಸು ಉಪಯೋಗಿಸಿ ಗಟ್ಟಿಯಾಗಿದ್ದರೂ, ಆದರೆ ಈಗಿನ ಪರಿಸ್ಥಿತಿ ಬೇರೆಯೇ ಇದೆ. ಆದ್ದರಿಂದ ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ಲಸಿಕೆ ಪಡೆಯಬೇಕು ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಮುಕ್ತವಾಗಬೇಕು. ಚೆನ್ನಂಗಿ ಬಸವನಹಳ್ಳಿ ಭಾಗದಲ್ಲಿನ ಆದಿವಾಸಿ ಜನರಿಗೆ ಈಗಾಗಲೇ ಅರಣ್ಯ ಹಕ್ಕುಪತ್ರ ನೀಡಲಾಗಿದ್ದು, ಸದ್ಯದಲ್ಲಿಯೇ ಆರ್ಟಿಸಿ ನೀಡಲಾಗುವುದು. ಜೊತೆಗೆ ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಡುವಲ್ಲಿ ಶಾಸಕರು ಮುಂದಾಗಿದ್ದಾರೆ ಎಂದರು.
ಚೆನ್ನಯ್ಯನಕೋಟೆ ಗ್ರಾ.ಪಂ ಸದಸ್ಯ ಹಾಗೂ ಆದಿವಾಸಿ ಮುಖಂಡರಾದ ಜೆ.ಕೆ.ಅಪ್ಪಾಜಿ ಮಾತನಾಡಿ, ""ಶಾಸಕ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಎಲ್ಲಾ ಹಾಡಿಯ ಆದಿವಾಸಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಎರಡು ತಾಲ್ಲೂಕಿನ ಎಲ್ಲಾ ಹಾಡಿಗಳಿಗೆ ಶಾಸಕರು ಭೇಟಿ ನೀಡಿ ಆದಿವಾಸಿ ಜನರನ್ನು ಮನವೊಲಿಸಿ ಲಸಿಕೆ ಕೊಡಿಸುತ್ತಿರುವುದನ್ನು ಯಾರೂ ಮರೆಯುವಂತಿಲ್ಲ ಎಂದು ಜೆ.ಕೆ.ಅಪ್ಪಾಜಿ ಹೇಳಿದರು.
ಕೋವಿಡ್ ಲಸಿಕೆ ಪಡೆಯುವುದರಿಂದ ಮದ್ಯಪಾನ ಮಾಡುವುದನ್ನು ಬಿಡಬೇಕಾಗುತ್ತದೆ ಎಂಬ ಮನೋಭಾವ ಆದಿವಾಸಿ ಜನರಲ್ಲಿದೆ. ಇದು ಹೋಗಬೇಕು. ಆದಿವಾಸಿ ಜನರ ಜೀವ ಮತ್ತು ಜೀವನ ಅತಿ ಮುಖ್ಯ, ಆ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಅವರು ಕೋರಿದರು.
ಐಟಿಡಿಪಿ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ ಅವರು ಮಾಹಿತಿ ನೀಡಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ 79 ಹಾಡಿಗಳಿದ್ದು, 38 ಸಾವಿರ ಆದಿವಾಸಿ ಜನರಿದ್ದಾರೆ. 7 ಸಾವಿರ ಗಿರಿಜನ ಕುಟುಂಬಗಳಿಗೆ ಕೋವಿಡ್ ಲಸಿಕೆ ನೀಡುವ ಗುರಿ ಇದ್ದು, ಈಗಾಗಲೇ 29 ಹಾಡಿಯ 600ಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಉತ್ಸಾಹದಿಂದ ಕೋವಿಡ್ ಲಸಿಕೆ ಪಡೆದ ಆದಿವಾಸಿ ಜನರು
ಕೊಡಗು ಜಿಲ್ಲೆ ವಿರಾಜಪೇಟೆ ಶಾಸಕರಾದ ಕೆ.ಜಿ. ಬೋಪಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ರಮೇಶ್ ಹೊಳ್ಳ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಜಿಲ್ಲೆಯ ಮಾಲ್ದಾರೆ ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂ. ವ್ಯಾಪ್ತಿಯ ಆದಿವಾಸಿ ಹಾಡಿಗಳಿಗೆ ಶನಿವಾರ ಭೇಟಿ ನೀಡಿ ಕೋವಿಡ್ ನಿರೋಧಕ ಲಸಿಕೆ ಪಡೆಯುವಂತೆ ಮನವೊಲಿಸಿದರು.
ವಿರಾಜಪೇಟೆ ತಾಲ್ಲೂಕಿನ ಹಾಡಿಗೆ ಭೇಟಿ ನೀಡಿ ಅಲ್ಲಿನ ಜನರನ್ನು ಮಾತನಾಡಿಸಿ ಕೋವಿಡ್ ಲಸಿಕೆ ಪಡೆದುಕೊಳ್ಳಿ, ಲಸಿಕೆ ಪಡೆಯುವುದರಿಂದ ಕೊರೊನಾ ಬರದಂತೆ ತಡೆಯಬಹುದಾಗಿದೆ ಎಂದು ಶಾಸಕರು ಹೇಳಿದರು.
ಹಾಗೆಯೇ ಗಿರಿಜನರ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದ ಶಾಸಕರು, ಅರಣ್ಯ ಹಕ್ಕು ಪತ್ರ ನೀಡಲಾಗಿದೆಯೇ, ಸರ್ಕಾರದ ಸೌಲಭ್ಯಗಳು ದೊರೆಯುತ್ತಿವೆಯೇ ಎಂದು ಅಲ್ಲಿನ ಜನರನ್ನು ಕೇಳಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಆದಿವಾಸಿ ಜನರು, ಅರಣ್ಯ ಹಕ್ಕುಪತ್ರ ಸಿಕ್ಕಿದ್ದು, ಮನೆ ನಿರ್ಮಿಸಿಕೊಡಬೇಕಿದೆ ಎಂದು ಶಾಸಕರ ಗಮನಕ್ಕೆ ತಂದರು. ಮತ್ತೊಬ್ಬರು ಒಂಟಿ ಜೀವನ, ಬಂಧು- ಬಳಗ ಯಾರೂ ನೋಡುತ್ತಿಲ್ಲ, ತಮಗೆ ಮನೆ ಇಲ್ಲವೆಂದು ಅಳಲು ತೋಡಿಕೊಂಡರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications